<p><strong>ಬೆಳಗಾವಿ: </strong>‘ಈ ಬಾರಿ ಚುನಾವಣೆ ಪ್ರಚಾರಕ್ಕೆ ಹೊಸ ವಾಹನ ತಂದಿದ್ದೇವೆ. ಎರಡ್ಮೂರು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಅದಕ್ಕೆ ಚಾಲನೆ ಕೊಡುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಈ ಬಾರಿ ಚುನಾವಣೆಯಲ್ಲೂ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುತ್ತೀರಾ?’ ಪ್ರಶ್ನೆಗೆ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದರು.</p>.<p>‘ಪ್ರತಿದಿನ ರಾಹುಕಾಲವಿರುತ್ತದೆ. ಏ.13ರಿಂದ 20ರವರೆಗಿನ ಅವಧಿಯಲ್ಲೂ ರಾಹುಕಾಲವಿದ್ದರೆ, ಆ ವೇಳೆಯಲ್ಲೇ ನಾಮಪತ್ರ ಸಲ್ಲಿಸುತ್ತೇವೆ. ರಾಹುಕಾಲ ಮತ್ತು ಒಳ್ಳೆಯ ಕಾಲ ಎಂಬುದು ನಮ್ಮ ಭ್ರಮೆಯಷ್ಟೇ’ ಎಂದರು.</p>.<p>‘ಕೆಲವರು ನಿಮ್ಮನ್ನು ಹಿಂದೂ ವಿರೋಧಿ ಮತ್ತು ಸಂಪ್ರದಾಯ ವಿರೋಧಿ’ ಎಂದು ಆರೋಪಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ, ‘ಈ ಆಚರಣೆ ಕೆಟ್ಟಿದ್ದು ಎಂದು ಹೇಳುವವರು ಯಾರು? ಅದು ನಮ್ಮ ವಿಚಾರ. ಮೂವತ್ತು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದೇವೆ. ಈ ದಾರಿ ತೋರಿಸಿದ್ದೇ ಬಸವಣ್ಣ, ಬುದ್ಧ ಮತ್ತು ಅಂಬೇಡ್ಕರ್. ಈ ಆಯ್ಕೆ ನಮಗೆ ಬಿಟ್ಟಿದ್ದು. ಹೀಗೆ ಮಾಡಿ ಎಂದರೆ ಆಗುವುದಿಲ್ಲ’ ಎಂದು ತಿರುಗೇಟು ಕೊಟ್ಟರು.</p>.<p>‘ಯಮಕನಮರಡಿ ಕ್ಷೇತ್ರದಲ್ಲಿ ಈ ಬಾರಿ ಪ್ರಚಾರ ಮಾಡುತ್ತೇನೆ. ಇಲ್ಲದಿದ್ದರೆ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಾರೆ. ಕಳೆದ ಬಾರಿ ಅವರು ಅಪಪ್ರಚಾರ ಮಾಡಿದ್ದರಿಂದಲೇ ಗೆಲುವಿನ ಅಂತರ ಕಡಿಮೆಯಾಗಿತ್ತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಈಗ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಿದೆ. ಬಾದಾಮಿಗೆ ಬರಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಯಾವುದೇ ನಾಯಕರಿಂದ ಸಿದ್ದರಾಮಯ್ಯ ಸೋಲಿಸಲು ಸಾಧ್ಯವಿಲ್ಲ. ವರುಣಾ ಕ್ಷೇತ್ರ 40 ವರ್ಷಗಳಿಂದ ಅವರ ಕೈಹಿಡಿದಿದೆ. ಈ ಬಾರಿ ಅಲ್ಲಿ ಸೋಲುವ ಪ್ರಶ್ನೆಯೇ ಉದ್ಭವಿಸದು. ನಾನೂ ವರುಣಾ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಈ ಬಾರಿ ಚುನಾವಣೆ ಪ್ರಚಾರಕ್ಕೆ ಹೊಸ ವಾಹನ ತಂದಿದ್ದೇವೆ. ಎರಡ್ಮೂರು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಅದಕ್ಕೆ ಚಾಲನೆ ಕೊಡುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಈ ಬಾರಿ ಚುನಾವಣೆಯಲ್ಲೂ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುತ್ತೀರಾ?’ ಪ್ರಶ್ನೆಗೆ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದರು.</p>.<p>‘ಪ್ರತಿದಿನ ರಾಹುಕಾಲವಿರುತ್ತದೆ. ಏ.13ರಿಂದ 20ರವರೆಗಿನ ಅವಧಿಯಲ್ಲೂ ರಾಹುಕಾಲವಿದ್ದರೆ, ಆ ವೇಳೆಯಲ್ಲೇ ನಾಮಪತ್ರ ಸಲ್ಲಿಸುತ್ತೇವೆ. ರಾಹುಕಾಲ ಮತ್ತು ಒಳ್ಳೆಯ ಕಾಲ ಎಂಬುದು ನಮ್ಮ ಭ್ರಮೆಯಷ್ಟೇ’ ಎಂದರು.</p>.<p>‘ಕೆಲವರು ನಿಮ್ಮನ್ನು ಹಿಂದೂ ವಿರೋಧಿ ಮತ್ತು ಸಂಪ್ರದಾಯ ವಿರೋಧಿ’ ಎಂದು ಆರೋಪಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ, ‘ಈ ಆಚರಣೆ ಕೆಟ್ಟಿದ್ದು ಎಂದು ಹೇಳುವವರು ಯಾರು? ಅದು ನಮ್ಮ ವಿಚಾರ. ಮೂವತ್ತು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದೇವೆ. ಈ ದಾರಿ ತೋರಿಸಿದ್ದೇ ಬಸವಣ್ಣ, ಬುದ್ಧ ಮತ್ತು ಅಂಬೇಡ್ಕರ್. ಈ ಆಯ್ಕೆ ನಮಗೆ ಬಿಟ್ಟಿದ್ದು. ಹೀಗೆ ಮಾಡಿ ಎಂದರೆ ಆಗುವುದಿಲ್ಲ’ ಎಂದು ತಿರುಗೇಟು ಕೊಟ್ಟರು.</p>.<p>‘ಯಮಕನಮರಡಿ ಕ್ಷೇತ್ರದಲ್ಲಿ ಈ ಬಾರಿ ಪ್ರಚಾರ ಮಾಡುತ್ತೇನೆ. ಇಲ್ಲದಿದ್ದರೆ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಾರೆ. ಕಳೆದ ಬಾರಿ ಅವರು ಅಪಪ್ರಚಾರ ಮಾಡಿದ್ದರಿಂದಲೇ ಗೆಲುವಿನ ಅಂತರ ಕಡಿಮೆಯಾಗಿತ್ತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಈಗ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಿದೆ. ಬಾದಾಮಿಗೆ ಬರಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಯಾವುದೇ ನಾಯಕರಿಂದ ಸಿದ್ದರಾಮಯ್ಯ ಸೋಲಿಸಲು ಸಾಧ್ಯವಿಲ್ಲ. ವರುಣಾ ಕ್ಷೇತ್ರ 40 ವರ್ಷಗಳಿಂದ ಅವರ ಕೈಹಿಡಿದಿದೆ. ಈ ಬಾರಿ ಅಲ್ಲಿ ಸೋಲುವ ಪ್ರಶ್ನೆಯೇ ಉದ್ಭವಿಸದು. ನಾನೂ ವರುಣಾ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>