ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ಕಾರ್ಯಾಚರಣೆ ಆರಂಭಿಸಿದ್ದರು. ಆರೋಪಿಗಳ ಸೂಚನೆಯಂತೆ ಸೋಮವಾರ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಗೆ ತೆರಳಿದ ವೆಂಕಟೇಶ್ ಬಾಬು, ಲಂಚದ ಹಣ ತಲುಪಿಸಿದರು. ತಕ್ಷಣ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಕಿಶೋರ್ ಮತ್ತು ದತ್ತಾತ್ರೇಯ ಅವರನ್ನು ಬಂಧಿಸಿದರು.