‘ಆಂಧ್ರಪ್ರದೇಶದಲ್ಲಿರುವ ಕಾಳಹಸ್ತಿ ದೇವಸ್ಥಾನಕ್ಕೆ ಯುವರಾಜ್ ಆಗಾಗ ಬರುತ್ತಿದ್ದರು. ನನ್ನನ್ನು ಭೇಟಿಯಾಗುತ್ತಿದ್ದ ಅವರು, ಕುಶಲೋಪರಿ ವಿಚಾರಿಸುತ್ತಿದ್ದರು. ಕೆಲ ತಿಂಗಳ ಹಿಂದಷ್ಟೇ ದೇವಸ್ಥಾನಕ್ಕೆ ಬಂದಿದ್ದ ಆರೋಪಿ, ‘ಕೇಂದ್ರ ಸರ್ಕಾ ರದ ಬಿಜೆಪಿ ಮುಖಂಡರು ಹಾಗೂ ಆರ್ಎಸ್ಎಸ್ ನಾಯಕರು ನನಗೆ ಪರಿ
ಚಯಸ್ಥರು. ಅವರಿಗೆ ಹೇಳಿ, ನಿಮಗೆ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಹುದ್ದೆ ಕೊಡಿಸುತ್ತೇನೆ’ ಎಂದಿದ್ದರು. ಮುಖಂಡರ ಜೊತೆ ತೆಗೆಸಿಕೊಂಡಿದ್ದ ಫೋಟೊ ತೋರಿಸಿ ನಂಬಿಸಿದ್ದರು’ ಎಂದು ಆನಂದ ಕುಮಾರ್ ದೂರಿನಲ್ಲಿ ಹೇಳಿದ್ದಾರೆ.