<p>ಬೆಂಗಳೂರು: ‘ಕೋವಿಡ್ ಸಂದರ್ಭದಲ್ಲಿ ಕಲಿಕೆಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಡಿಜಿಟಲ್ ಕಲಿಕಾ ಯೋಜನೆಯಡಿ ₹ 163 ಕೋಟಿ ವೆಚ್ಚದಲ್ಲಿ ಸರ್ಕಾರಿ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ತರಗತಿಗಳ ಉದ್ಘಾಟಿಸಿ ಮತ್ತು ಕೆಲವು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿ ವಿತರಿಸಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ₹ 27.77 ಕೋಟಿ ವೆಚ್ಚದಲ್ಲಿ 2,500 ಸ್ಮಾರ್ಟ್ ತರಗತಿಗಳ ಸ್ಥಾಪಿಸಲಾಗಿದೆ. ಪ್ರತಿ ಸ್ಮಾರ್ಟ್ ತರಗತಿಯಲ್ಲಿ ಮಲ್ಟಿ ಮೀಡಿಯಾ ಪ್ರೊಜೆಕ್ಟರ್, ಯುಪಿಎಸ್, ಅಂಡ್ರಾಯ್ಡ್ ಬಾಕ್ಸ್, ವೈ-ಫೈ ಅಳವಡಿಸಲಾಗಿದ್ದು, ಬಹುಮಾಧ್ಯಮಗಳ ಬಳಕೆ ಮಾಡಲಾಗುವುದು’ ಎಂದರು.</p>.<p>‘ನಗರ ಹಾಗೂ ಗ್ರಾಮೀಣ ಪ್ರದೇಶದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಾರತಮ್ಯ ಇಲ್ಲದೆ ಕಲಿಕೆ ನಿರಂತರವಾಗಿ ಮುಂದುವರಿಸಲು ಮತ್ತು ಉನ್ನತ ಶಿಕ್ಷಣದಿಂದ ವಂಚಿತರಾಗದೆ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಳ್ಳಲು ಈ ಯೋಜನೆ ಅನುಕೂಲ ಆಗಲಿದೆ’ ಎಂದರು.</p>.<p>ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಗಳ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಮಾಡಿರುವ ದೇಶದ ಮೊದಲ ರಾಜ್ಯ ಕರ್ನಾಟಕ’ ಎಂದರು.</p>.<p>‘ಉನ್ನತ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನದ ಅವಿಷ್ಕಾರಎಲ್ಲ ವಿದ್ಯಾರ್ಥಿಗಳಿಗೆ ಉಪಯೋಗವಾಗಬೇಕು. ಈಗಿನವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಕಸಿದುಕೊಂಡಂತೆ ಆಗಬಾರದು ಎನ್ನುವ ದೃಷ್ಟಿಯಿಂದ ಆಧುನಿಕ ಉಪಕರಣಗಳನ್ನು ಅಳವಡಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ<br />ಶಿಕ್ಷಣ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೋವಿಡ್ ಸಂದರ್ಭದಲ್ಲಿ ಕಲಿಕೆಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಡಿಜಿಟಲ್ ಕಲಿಕಾ ಯೋಜನೆಯಡಿ ₹ 163 ಕೋಟಿ ವೆಚ್ಚದಲ್ಲಿ ಸರ್ಕಾರಿ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ತರಗತಿಗಳ ಉದ್ಘಾಟಿಸಿ ಮತ್ತು ಕೆಲವು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿ ವಿತರಿಸಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ₹ 27.77 ಕೋಟಿ ವೆಚ್ಚದಲ್ಲಿ 2,500 ಸ್ಮಾರ್ಟ್ ತರಗತಿಗಳ ಸ್ಥಾಪಿಸಲಾಗಿದೆ. ಪ್ರತಿ ಸ್ಮಾರ್ಟ್ ತರಗತಿಯಲ್ಲಿ ಮಲ್ಟಿ ಮೀಡಿಯಾ ಪ್ರೊಜೆಕ್ಟರ್, ಯುಪಿಎಸ್, ಅಂಡ್ರಾಯ್ಡ್ ಬಾಕ್ಸ್, ವೈ-ಫೈ ಅಳವಡಿಸಲಾಗಿದ್ದು, ಬಹುಮಾಧ್ಯಮಗಳ ಬಳಕೆ ಮಾಡಲಾಗುವುದು’ ಎಂದರು.</p>.<p>‘ನಗರ ಹಾಗೂ ಗ್ರಾಮೀಣ ಪ್ರದೇಶದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಾರತಮ್ಯ ಇಲ್ಲದೆ ಕಲಿಕೆ ನಿರಂತರವಾಗಿ ಮುಂದುವರಿಸಲು ಮತ್ತು ಉನ್ನತ ಶಿಕ್ಷಣದಿಂದ ವಂಚಿತರಾಗದೆ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಳ್ಳಲು ಈ ಯೋಜನೆ ಅನುಕೂಲ ಆಗಲಿದೆ’ ಎಂದರು.</p>.<p>ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ‘ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಗಳ ಮೂಲಕ ಕಲಿಕಾ ನಿರ್ವಹಣಾ ವ್ಯವಸ್ಥೆ ಮಾಡಿರುವ ದೇಶದ ಮೊದಲ ರಾಜ್ಯ ಕರ್ನಾಟಕ’ ಎಂದರು.</p>.<p>‘ಉನ್ನತ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನದ ಅವಿಷ್ಕಾರಎಲ್ಲ ವಿದ್ಯಾರ್ಥಿಗಳಿಗೆ ಉಪಯೋಗವಾಗಬೇಕು. ಈಗಿನವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಕಸಿದುಕೊಂಡಂತೆ ಆಗಬಾರದು ಎನ್ನುವ ದೃಷ್ಟಿಯಿಂದ ಆಧುನಿಕ ಉಪಕರಣಗಳನ್ನು ಅಳವಡಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ<br />ಶಿಕ್ಷಣ ನೀಡಲು ಪ್ರಯತ್ನಿಸಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>