ಕಳೆದ ಸಾಲಿನ ಹಣ ನೀಡುವಂತೆಯೂ ವಿಧಾನ ಮಂಡಲ ಅಧಿವೇಶನದಲ್ಲೂ ಒತ್ತಾಯಿಸಲಾಗಿತ್ತು. ಬಾಕಿ ಉಳಿದಿದ್ದ ಹಣ ನೀಡುವ ಜತೆಗೆ 2023–24ನೇ ಸಾಲಿನಲ್ಲೂ ತಲಾ ₹10 ಕೋಟಿ ನೀಡಲು ಮುಖ್ಯಮಂತ್ರಿ ಸಹಿ ಹಾಕಿದ್ದಾರೆ. ಇದರಿಂದ ಸಮುದಾಯದ ಜನರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಿ.ಎಸ್.ಅರುಣ್ ಮಾಹಿತಿ ನೀಡಿದ್ದಾರೆ.