<p><strong>ಮೈಸೂರು:</strong> ಮೈಸೂರು ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಗೆ ಒಳಪಡುವ ನಾಲ್ಕು ಜಿಲ್ಲೆಗಳಿಂದ 10 ಸರ್ಕಾರಿ ಶಾಲೆಗಳು ಹಾಗೂ ಚಾಮರಾಜನಗರ ಜಿಲ್ಲೆಹನೂರು ತಾಲ್ಲೂಕಿನ 6 ಗ್ರಾಮಗಳನ್ನು ಅಭಿವೃದ್ಧಿಪಡಿಸಲು ದತ್ತು ಪಡೆದುಕೊಂಡಿದೆ.</p>.<p>‘ಉನ್ನತ ಭಾರತ ಅಭಿಯಾನ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ ಉದ್ದೇಶದಿಂದ 6 ಗ್ರಾಮ ದತ್ತು ಪಡೆಯಲಾಗಿದೆ. ನೂರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಧನೆಗಳನ್ನು ಮಾಡಿರುವಂತಹ ಶಾಲೆಗಳನ್ನು ಗುರುತಿಸಿ ಮತ್ತಷ್ಟು ಬಲವರ್ಧನೆಗೊಳಿಸುವ ಉದ್ದೇಶದಿಂದ 10 ಶಾಲೆ ದತ್ತು ಸ್ವೀಕರಿಸಲಾಗಿದೆ’ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಗುಣಮಟ್ಟ ಹೆಚ್ಚಿಸಲು ಹಾಗೂ ಮಾದರಿ ಶಾಲೆಗಳನ್ನಾಗಿಸುವ ಉದ್ದೇಶದಿಂದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಈ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದೇವೆ. ಈ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಅವುಗಳ ನವೀಕರಣಕ್ಕಾಗಿ 10 ಸದಸ್ಯರ ಸಮಿತಿ ರಚಿಸಿದ್ದು, ಸದಸ್ಯರು ಶಾಲೆಗಳಿಗೆ ಖುದ್ದು ಭೇಟಿ ನೀಡಿ, ನ್ಯೂನತೆ ಗುರುತಿಸಿದ್ದಾರೆ. ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಎಂ.ಆರ್.ದೊರೆಸ್ವಾಮಿ ಜೊತೆ ವಿಡಿಯೊಕಾನ್ಫರೆನ್ಸ್ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲಾಯಿತು’ ಎಂದು ಮಾಹಿತಿ ನೀಡಿದರು.</p>.<p>ವಿದ್ಯಾರ್ಥಿಗಳಿಗೆ ಶೌಚಾಲಯವನ್ನು ನಿರ್ಮಿಸಿ ಕೊಡುವುದು, ಕಾಂಪೌಂಡ್ ನಿರ್ಮಾಣ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವುದು, ಶಾಲೆಗಳ ಪುನರುಜ್ಜೀವನ ಮಾಡುವುದು, ಶತಮಾನ ಕಂಡ ಶಾಲೆಗಳನ್ನು ಗುರುತಿಸಿ ಗೌರವಿಸುವುದು, ಸಮಗ್ರ ಇತಿಹಾಸ ದಾಖಲೀಕರಿಸುವುದು, ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದು ವಿಶ್ವವಿದ್ಯಾಲಯದ ಆಶಯವಾಗಿದೆ ಎಂದರು.</p>.<p>ಕುಲಸಚಿವ ಪ್ರೊ.ಆರ್.ಶಿವಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ.ಎನ್.ಎಂ.ತಳವಾರ, ಪ್ರಾಚ್ಯವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಇದ್ದರು.</p>.<p><strong>ಪುಸ್ತಕ ಪ್ರದರ್ಶನ–ರಿಯಾಯಿತಿ ಮಾರಾಟ</strong></p>.<p>ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗ ವತಿಯಿಂದ ಜ.6 ಹಾಗೂ 7ರಂದು ಪುಸ್ತಕ ಮೇಳ ಆಯೋಜಿಸಿದ್ದು, ಅಂದು ಶೇ 50 ರಿಯಾಯಿತಿ ಮಾರಾಟದಲ್ಲಿ ಪುಸ್ತಕಗಳು ದೊರೆಯಲಿವೆ ಎಂದು ಪ್ರೊ.ಹೇಮಂತಕುಮಾರ್ ಹೇಳಿದರು.</p>.<p>ಕವಿಜನ ಕಾಮಧೇನು ಮುಮ್ಮಡಿ ಕೃಷ್ಣರಾಜ ಒಡೆಯರ್ (ಲೇಖಕ ಎಸ್.ಶಿವರಾಜಪ್ಪ), ಸಿದ್ದಸಿದ್ಧಾಂತ ಪದ್ಧತಿ (ಸಿ.ಪಾರ್ವತಿ), ಅಶ್ವಲಕ್ಷಣಮ್ (ಎಂ.ಗೀತಾ), ಪ್ರೊ.ಎಚ್.ದೇವಿರಪ್ಪ ಬದುಕು–ಬರಹ (ಜಿ.ಎನ್.ಸಿದ್ದಲಿಂಗಪ್ಪ), ಶ್ರೀಚಾಮುಂಡಿಕಾ ಲಘುನಿಘಂಟು (ಎಸ್.ಸಿ.ಶೋಭಾ), ಸೂರ್ಯಚಂದ್ರವಂಶಾನುಚರಿತಮ್ (ದಿದ್ದಿಗಿ ವಂಶಿ ಕೃಷ್ಣ) ಕೃತಿಗಳು ಅಂದು ಬಿಡುಗಡೆ ಮಾಡಲಾಗುವುದು ಎಂದರು.</p>.<p><strong>ಕಾವೇರಿ ನೀರು ಪೂರೈಸಲು ಕ್ರಮ</strong></p>.<p>ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ನೀರಿಗಾಗಿ ಕೇವಲ 16 ಬೋರ್ವೆಲ್ಗಳನ್ನು ಅವಲಂಬಿಸಬೇಕಿದೆ. ಹೀಗಾಗಿ, ಶೌಚಾಲಯಗಳಲ್ಲೂ ನೀರಿಗೆ ಸಮಸ್ಯೆ ಉಂಟಾಗಿದೆ. ಪಾಲಿಕೆ ಜೊತೆ ಚರ್ಚಿಸಿದ್ದು, ವರ್ಷದಲ್ಲಿ ಕಾವೇರಿ ನೀರು ಪೂರೈಸಲು ಕ್ರಮ ವಹಿಸಲಾಗುವುದು. ಅದಕ್ಕೆ ನಾವೇ ಹಣ ಪಾವತಿಸಲಿದ್ದು, ನಿತ್ಯ 2 ಲಕ್ಷ ಲೀಟರ್ ನೀರು ಲಭ್ಯವಾಗಲಿದೆ ಎಂದು ಕುಲಪತಿ ಹೇಳಿದರು.</p>.<p>ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳು ತರಗತಿಗೆ ಬರಲು ಅನುಮತಿ ನೀಡಲಾಗಿದೆ. ಉಳಿದ ತರಗತಿಗಳ ವಿದ್ಯಾರ್ಥಿಗಳಿಗೂ ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಈ ಸಲ ದಾಖಲಾತಿ ಪ್ರಮಾಣ ಕೂಡ ಉತ್ತಮವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಗೆ ಒಳಪಡುವ ನಾಲ್ಕು ಜಿಲ್ಲೆಗಳಿಂದ 10 ಸರ್ಕಾರಿ ಶಾಲೆಗಳು ಹಾಗೂ ಚಾಮರಾಜನಗರ ಜಿಲ್ಲೆಹನೂರು ತಾಲ್ಲೂಕಿನ 6 ಗ್ರಾಮಗಳನ್ನು ಅಭಿವೃದ್ಧಿಪಡಿಸಲು ದತ್ತು ಪಡೆದುಕೊಂಡಿದೆ.</p>.<p>‘ಉನ್ನತ ಭಾರತ ಅಭಿಯಾನ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ ಉದ್ದೇಶದಿಂದ 6 ಗ್ರಾಮ ದತ್ತು ಪಡೆಯಲಾಗಿದೆ. ನೂರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಧನೆಗಳನ್ನು ಮಾಡಿರುವಂತಹ ಶಾಲೆಗಳನ್ನು ಗುರುತಿಸಿ ಮತ್ತಷ್ಟು ಬಲವರ್ಧನೆಗೊಳಿಸುವ ಉದ್ದೇಶದಿಂದ 10 ಶಾಲೆ ದತ್ತು ಸ್ವೀಕರಿಸಲಾಗಿದೆ’ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಗುಣಮಟ್ಟ ಹೆಚ್ಚಿಸಲು ಹಾಗೂ ಮಾದರಿ ಶಾಲೆಗಳನ್ನಾಗಿಸುವ ಉದ್ದೇಶದಿಂದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಈ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದೇವೆ. ಈ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಅವುಗಳ ನವೀಕರಣಕ್ಕಾಗಿ 10 ಸದಸ್ಯರ ಸಮಿತಿ ರಚಿಸಿದ್ದು, ಸದಸ್ಯರು ಶಾಲೆಗಳಿಗೆ ಖುದ್ದು ಭೇಟಿ ನೀಡಿ, ನ್ಯೂನತೆ ಗುರುತಿಸಿದ್ದಾರೆ. ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣಾ ಸಲಹೆಗಾರ ಎಂ.ಆರ್.ದೊರೆಸ್ವಾಮಿ ಜೊತೆ ವಿಡಿಯೊಕಾನ್ಫರೆನ್ಸ್ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲಾಯಿತು’ ಎಂದು ಮಾಹಿತಿ ನೀಡಿದರು.</p>.<p>ವಿದ್ಯಾರ್ಥಿಗಳಿಗೆ ಶೌಚಾಲಯವನ್ನು ನಿರ್ಮಿಸಿ ಕೊಡುವುದು, ಕಾಂಪೌಂಡ್ ನಿರ್ಮಾಣ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವುದು, ಶಾಲೆಗಳ ಪುನರುಜ್ಜೀವನ ಮಾಡುವುದು, ಶತಮಾನ ಕಂಡ ಶಾಲೆಗಳನ್ನು ಗುರುತಿಸಿ ಗೌರವಿಸುವುದು, ಸಮಗ್ರ ಇತಿಹಾಸ ದಾಖಲೀಕರಿಸುವುದು, ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದು ವಿಶ್ವವಿದ್ಯಾಲಯದ ಆಶಯವಾಗಿದೆ ಎಂದರು.</p>.<p>ಕುಲಸಚಿವ ಪ್ರೊ.ಆರ್.ಶಿವಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ.ಎನ್.ಎಂ.ತಳವಾರ, ಪ್ರಾಚ್ಯವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಇದ್ದರು.</p>.<p><strong>ಪುಸ್ತಕ ಪ್ರದರ್ಶನ–ರಿಯಾಯಿತಿ ಮಾರಾಟ</strong></p>.<p>ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗ ವತಿಯಿಂದ ಜ.6 ಹಾಗೂ 7ರಂದು ಪುಸ್ತಕ ಮೇಳ ಆಯೋಜಿಸಿದ್ದು, ಅಂದು ಶೇ 50 ರಿಯಾಯಿತಿ ಮಾರಾಟದಲ್ಲಿ ಪುಸ್ತಕಗಳು ದೊರೆಯಲಿವೆ ಎಂದು ಪ್ರೊ.ಹೇಮಂತಕುಮಾರ್ ಹೇಳಿದರು.</p>.<p>ಕವಿಜನ ಕಾಮಧೇನು ಮುಮ್ಮಡಿ ಕೃಷ್ಣರಾಜ ಒಡೆಯರ್ (ಲೇಖಕ ಎಸ್.ಶಿವರಾಜಪ್ಪ), ಸಿದ್ದಸಿದ್ಧಾಂತ ಪದ್ಧತಿ (ಸಿ.ಪಾರ್ವತಿ), ಅಶ್ವಲಕ್ಷಣಮ್ (ಎಂ.ಗೀತಾ), ಪ್ರೊ.ಎಚ್.ದೇವಿರಪ್ಪ ಬದುಕು–ಬರಹ (ಜಿ.ಎನ್.ಸಿದ್ದಲಿಂಗಪ್ಪ), ಶ್ರೀಚಾಮುಂಡಿಕಾ ಲಘುನಿಘಂಟು (ಎಸ್.ಸಿ.ಶೋಭಾ), ಸೂರ್ಯಚಂದ್ರವಂಶಾನುಚರಿತಮ್ (ದಿದ್ದಿಗಿ ವಂಶಿ ಕೃಷ್ಣ) ಕೃತಿಗಳು ಅಂದು ಬಿಡುಗಡೆ ಮಾಡಲಾಗುವುದು ಎಂದರು.</p>.<p><strong>ಕಾವೇರಿ ನೀರು ಪೂರೈಸಲು ಕ್ರಮ</strong></p>.<p>ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ನೀರಿಗಾಗಿ ಕೇವಲ 16 ಬೋರ್ವೆಲ್ಗಳನ್ನು ಅವಲಂಬಿಸಬೇಕಿದೆ. ಹೀಗಾಗಿ, ಶೌಚಾಲಯಗಳಲ್ಲೂ ನೀರಿಗೆ ಸಮಸ್ಯೆ ಉಂಟಾಗಿದೆ. ಪಾಲಿಕೆ ಜೊತೆ ಚರ್ಚಿಸಿದ್ದು, ವರ್ಷದಲ್ಲಿ ಕಾವೇರಿ ನೀರು ಪೂರೈಸಲು ಕ್ರಮ ವಹಿಸಲಾಗುವುದು. ಅದಕ್ಕೆ ನಾವೇ ಹಣ ಪಾವತಿಸಲಿದ್ದು, ನಿತ್ಯ 2 ಲಕ್ಷ ಲೀಟರ್ ನೀರು ಲಭ್ಯವಾಗಲಿದೆ ಎಂದು ಕುಲಪತಿ ಹೇಳಿದರು.</p>.<p>ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳು ತರಗತಿಗೆ ಬರಲು ಅನುಮತಿ ನೀಡಲಾಗಿದೆ. ಉಳಿದ ತರಗತಿಗಳ ವಿದ್ಯಾರ್ಥಿಗಳಿಗೂ ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಈ ಸಲ ದಾಖಲಾತಿ ಪ್ರಮಾಣ ಕೂಡ ಉತ್ತಮವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>