ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಜಿಲ್ಲೆ ಮಕ್ಕಳಿಗೆ ‘ಕ್ಷೀರ ಭಾಗ್ಯ’ ವ್ಯತ್ಯಯ

Last Updated 25 ಮಾರ್ಚ್ 2023, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕ್ಷೀರಭಾಗ್ಯ ಯೋಜನೆಯಲ್ಲಿ ನೀಡುವ ಹಾಲು ರಾಜ್ಯದ 11 ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಜನವರಿಯಿಂದ ವಿತರಣೆಯಾಗಿಲ್ಲ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಗದಗ, ಉತ್ತರ ಕನ್ನಡ, ಬೀದರ್‌, ಯಾದಗಿರಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಮಕ್ಕಳಿಗೆ ಹಾಲು ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಪ್ರತಿ ಕೆ.ಜಿ. ಹಾಲಿನ ಪುಡಿಗೆ ಸರ್ಕಾರ ₹ 275 ನಿಗದಿ ಮಾಡಿತ್ತು. ಬೆಲೆ ಹೆಚ್ಚಿಸಬೇಕು ಎಂಬ ಕೆಎಂಎಫ್‌ನ ಬೇಡಿಕೆಗೆ ಸ್ಪಂದಿಸಿದ್ದ ಸರ್ಕಾರ ₹ 25 ಹೆಚ್ಚಳ ಮಾಡಿತ್ತು. ಆದರೂ, ಶಾಲೆಗಳಿಗೆ ವಿತರಿಸಬೇಕಿದ್ದ ಹಾಲಿನ ಪುಡಿಯನ್ನು ಸಿಹಿತಿಂಡಿಗಳು, ಐಸ್‌ಕ್ರೀಂ ಮತ್ತು ಇತರ ಉತ್ಪನ್ನಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಬಳಕೆ ಮಾಡಿಕೊಂಡಿದೆ ಎಂಬ ದೂರುಗಳೂ ಇವೆ.

‘ಸಿಹಿ ಪದಾರ್ಥಗಳ ತಯಾರಿಕೆಗೆ ಬಳಸಿಕೊಂಡಿಲ್ಲ. ಸ್ಥಳೀಯ ಮಟ್ಟದಲ್ಲಿ ಹಾಲು ಸಂಗ್ರಹಣೆಯ ಕೊರತೆಯಿದೆ. ದಿನಕ್ಕೆ ಸುಮಾರು 18 ಲಕ್ಷ ಲೀಟರ್‌ಗೆ ಬೇಡಿಕೆ ಇದೆ. 14 ಲಕ್ಷ ಲೀಟರ್‌ ಪೂರೈಸಲು ಸಾಧ್ಯವಾಗುತ್ತಿದೆ’ ಎಂದು ಕೆಎಂಎಫ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

'ಬೆಲೆ ಏರಿಕೆಯ ನಂತರವೂ ನಿರೀಕ್ಷೆಗೆ ತಕ್ಕಂತೆ ಹಾಲು ಪೂರೈಕೆ ಯಾಗುತ್ತಿಲ್ಲ. ತಕ್ಷಣ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಸರಿದೂಗಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಆರ್‌.ವಿಶಾಲ್‌ ಪ್ರತಿಕ್ರಿಯಿಸಿದರು.

‘ಫೆಬ್ರುವರಿವರೆಗೆ ಶೇ 70ರಷ್ಟು ಬೇಡಿಕೆಯನ್ನು ಪೂರೈಸಿದ್ದೇವೆ. ಈಗ ಹಾಲಿನ ಸಂಗ್ರಹಣೆಯಲ್ಲಿ 2 ಲಕ್ಷ ಲೀಟರ್‌ಗಳಷ್ಟು ಹೆಚ್ಚಳವಾಗಿದೆ. ಸರಬರಾಜು ಮುಂದುವರಿಸುತ್ತೇವೆ’ ಎಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT