ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಗದಗ, ಉತ್ತರ ಕನ್ನಡ, ಬೀದರ್, ಯಾದಗಿರಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಮಕ್ಕಳಿಗೆ ಹಾಲು ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಪ್ರತಿ ಕೆ.ಜಿ. ಹಾಲಿನ ಪುಡಿಗೆ ಸರ್ಕಾರ ₹ 275 ನಿಗದಿ ಮಾಡಿತ್ತು. ಬೆಲೆ ಹೆಚ್ಚಿಸಬೇಕು ಎಂಬ ಕೆಎಂಎಫ್ನ ಬೇಡಿಕೆಗೆ ಸ್ಪಂದಿಸಿದ್ದ ಸರ್ಕಾರ ₹ 25 ಹೆಚ್ಚಳ ಮಾಡಿತ್ತು. ಆದರೂ, ಶಾಲೆಗಳಿಗೆ ವಿತರಿಸಬೇಕಿದ್ದ ಹಾಲಿನ ಪುಡಿಯನ್ನು ಸಿಹಿತಿಂಡಿಗಳು, ಐಸ್ಕ್ರೀಂ ಮತ್ತು ಇತರ ಉತ್ಪನ್ನಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಬಳಕೆ ಮಾಡಿಕೊಂಡಿದೆ ಎಂಬ ದೂರುಗಳೂ ಇವೆ.