ಕೋವಿಡ್ ಕಾರಣಕ್ಕೆ 2020ರ ಜನವರಿಯಿಂದ ನೀಡಬೇಕಾದ ಮೂರು ತುಟ್ಟಿಭತ್ಯೆಗಳನ್ನು ಸರ್ಕಾರ ತಡೆ ಹಿಡಿದಿತ್ತು. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವ ತೀರ್ಮಾನ ಕೈಗೊಂಡಿತ್ತು. ಕೇಂದ್ರದ ಆದೇಶ ಮಂಗಳವಾರವಷ್ಟೇ (ಜುಲೈ 20) ಹೊರಬಿದ್ದಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಭೇಟಿ ಮಾಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗ, ರಾಜ್ಯದಲ್ಲೂ ತುಟ್ಟಿಭತ್ಯೆ ಹೆಚ್ಚಿಸುವಂತೆ ಮನವಿ ಮಾಡಿತ್ತು.