ಕೊನೆಯ ದಿನದ ಕಲಾಪದಲ್ಲಿ ಮಾತನಾಡುವಾಗ ಆ ಸಿಟ್ಟನ್ನು ಮರೆತಿದ್ದ ಯಡಿಯೂರಪ್ಪ, ‘ಮಾಜಿ ಪ್ರಧಾನಿ ದೇವೇಗೌಡರು ಸದನದಲ್ಲಿರುವ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ರಾಜಕಾರಣಿ. ಇಂತಹ ಇಳಿ ವಯಸ್ಸಿನಲ್ಲೂ ಅವರು ನಾಡಿನ ನೆಲ, ಜಲ, ಭಾಷೆ ಮತ್ತು ರೈತರ ಬಗ್ಗೆ ಚಿಂತನೆ ನಡೆಸುತ್ತಾ, ಮಾರ್ಗದರ್ಶನ ನೀಡುತ್ತಲೇ ಬಂದಿದ್ದಾರೆ' ಎಂದು ಬಣ್ಣಿಸಿದರು.