‘ದೇಶದಲ್ಲಿ ಜನ ಭಾಷೆ, ಜಾತಿ, ರಾಜ್ಯ ಎಂಬ ಸೀಮಿತವಾಗಿ ಯೋಚನೆ ಮಾಡುವ ಸ್ಥಿತಿ ಇದೆ. ಎಲ್ಲಕ್ಕಿಂತ ದೇಶವೇ ಮೊದಲು ಎಂಬ ಭಾವನೆ ಬಂದಾಗ ದೇಶ ಇನ್ನಷ್ಟು ಸುಭದ್ರವಾಗಿ ಎಲ್ಲ ರೀತಿಯಿಂದಲೂ ಪ್ರಗತಿ ಸಾಧ್ಯವಿದೆ. ಜನರ ಅಭ್ಯುದಯವೂ ಆಗಲಿದೆ. ಆದರೆ, ಜಾತಿ,ಭಾಷೆ ಇತ್ಯಾದಿಗಳ ವಿಚಾರದಲ್ಲಿ ಜನರನ್ನು ಒಡೆಯುವ ಹಿತಾಸಕ್ತಿಗಳು ನಿರಂತರವಾಗಿ ಕೆಲಸ ಮಾಡುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.