<p><strong>ಬೆಂಗಳೂರು: </strong>ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಂತೆ, ‘ಆಪರೇಷನ್ ಹಸ್ತ’ ನಡೆಸಿದ ಕಾಂಗ್ರೆಸ್, ಇಬ್ಬರು ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಮೇಯರ್ ಅವರನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.</p>.<p>ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಂಜುಂಡಸ್ವಾಮಿ ಮತ್ತು ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ ಅವರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾದರು. ಇದೇ ವೇಳೆ ಮೈಸೂರು ಮಾಜಿ ಮೇಯರ್ ಪುರುಷೋತ್ತಮ ಕೂಡಾ ‘ಕೈ’ ಹಿಡಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಎಲ್ಲರೂ ಕಾಂಗ್ರೆಸ್ ಸೇರಿದರು.</p>.<p>ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮುಖಂಡರಾದ ಸಲೀಂ ಅಹ್ಮದ್, ಪ್ರಿಯಾಂಕ್ ಖರ್ಗೆ, ಆರ್. ಧ್ರುವನಾರಾಯಣ, ರಾಜಶೇಖರ್ ಪಾಟೀಲ ಇದ್ದರು.</p>.<p>‘ಇವತ್ತು ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಿ ಶಾಸಕು ಪಕ್ಷ ಸೇರಲಿದ್ದು, ಅವರ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ನಂಜುಂಡಸ್ವಾಮಿ ಬಿಜೆಪಿಯಲ್ಲಿದ್ದರು. ಕೊಳ್ಳೆಗಾಲದಲ್ಲಿ ಅನೇಕ ಚುನಾವಣೆ ಎದುರಿಸಿದ್ದರು. ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಒಪ್ಪಿ ಕಾಂಗ್ರೆಸ್ಗೆ ಬಂದಿದ್ದಾರೆ. ಮನೋಹರ್ ಐನಾಪೂರ ಅವರು ನಾಗಠಾಣ ಕ್ಷೇತ್ರದ ಮಾಜಿ ಶಾಸಕ. ಅವರು ಮತ್ತು ಮಾಜಿ ಮೇಯರ್ ಪುರುಷೋತ್ತಮ್ ಕೂಡಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ’ ಎಂದರು.</p>.<p>‘ಚುನಾವಣೆ ಹೆಚ್ಚು ದೂರ ಇಲ್ಲ. ಬಿಜೆಪಿಯವರು ಚುನಾವಣೆಯನ್ನು ಈಗಲೇ ನಡೆಸಲು ತರಾತುರಿಯಲ್ಲಿ ಇದ್ದಾರೆ. ಎಷ್ಟು ದಿನ ಬೇಗ ಆಗುತ್ತೋ ಅಷ್ಟು ಲಾಭ ಎಂಬ ಮನಸ್ಥಿತಿಯಲ್ಲಿ ಅವರು ಇದ್ದಾರೆ. ತರಾತುರಿಯಲ್ಲಿ ಟೆಂಡರ್ ಕರೆದು ಹಣ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಶಿವಕುಮಾರ್ ಆರೋಪಿಸಿದರು.</p>.<p>‘ನಾವು ಯಾವಾಗ ಬೇಕಾದರೂ ಚುನಾವಣೆಗೆ ಸಿದ್ದ. ಚುನಾವಣಾ ಆಯೋಗ ಚುನಾವಣೆ ದಿನ ಘೋಷಣೆ ಮಾಡಬೇಕು. ಈ ಮೂಲಕ ಭ್ರಷ್ಟಾಚಾರ ಕೊನೆಗೊಳಿಸಬೇಕು. ನಮ್ಮ ಹಿಂದಿನ ಸಮೀಕ್ಷೆಯಲ್ಲಿ ನಮಗೆ 134 ಸ್ಥಾನಗಳು ಇದ್ದವು. ಈಗಿನ ಸಮೀಕ್ಷೆಯಲ್ಲಿ ಅದು 140ಕ್ಕೆ ಏರಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಂತೆ, ‘ಆಪರೇಷನ್ ಹಸ್ತ’ ನಡೆಸಿದ ಕಾಂಗ್ರೆಸ್, ಇಬ್ಬರು ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಮೇಯರ್ ಅವರನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.</p>.<p>ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಂಜುಂಡಸ್ವಾಮಿ ಮತ್ತು ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ ಅವರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾದರು. ಇದೇ ವೇಳೆ ಮೈಸೂರು ಮಾಜಿ ಮೇಯರ್ ಪುರುಷೋತ್ತಮ ಕೂಡಾ ‘ಕೈ’ ಹಿಡಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಎಲ್ಲರೂ ಕಾಂಗ್ರೆಸ್ ಸೇರಿದರು.</p>.<p>ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮುಖಂಡರಾದ ಸಲೀಂ ಅಹ್ಮದ್, ಪ್ರಿಯಾಂಕ್ ಖರ್ಗೆ, ಆರ್. ಧ್ರುವನಾರಾಯಣ, ರಾಜಶೇಖರ್ ಪಾಟೀಲ ಇದ್ದರು.</p>.<p>‘ಇವತ್ತು ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಿ ಶಾಸಕು ಪಕ್ಷ ಸೇರಲಿದ್ದು, ಅವರ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ನಂಜುಂಡಸ್ವಾಮಿ ಬಿಜೆಪಿಯಲ್ಲಿದ್ದರು. ಕೊಳ್ಳೆಗಾಲದಲ್ಲಿ ಅನೇಕ ಚುನಾವಣೆ ಎದುರಿಸಿದ್ದರು. ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಒಪ್ಪಿ ಕಾಂಗ್ರೆಸ್ಗೆ ಬಂದಿದ್ದಾರೆ. ಮನೋಹರ್ ಐನಾಪೂರ ಅವರು ನಾಗಠಾಣ ಕ್ಷೇತ್ರದ ಮಾಜಿ ಶಾಸಕ. ಅವರು ಮತ್ತು ಮಾಜಿ ಮೇಯರ್ ಪುರುಷೋತ್ತಮ್ ಕೂಡಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ’ ಎಂದರು.</p>.<p>‘ಚುನಾವಣೆ ಹೆಚ್ಚು ದೂರ ಇಲ್ಲ. ಬಿಜೆಪಿಯವರು ಚುನಾವಣೆಯನ್ನು ಈಗಲೇ ನಡೆಸಲು ತರಾತುರಿಯಲ್ಲಿ ಇದ್ದಾರೆ. ಎಷ್ಟು ದಿನ ಬೇಗ ಆಗುತ್ತೋ ಅಷ್ಟು ಲಾಭ ಎಂಬ ಮನಸ್ಥಿತಿಯಲ್ಲಿ ಅವರು ಇದ್ದಾರೆ. ತರಾತುರಿಯಲ್ಲಿ ಟೆಂಡರ್ ಕರೆದು ಹಣ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಶಿವಕುಮಾರ್ ಆರೋಪಿಸಿದರು.</p>.<p>‘ನಾವು ಯಾವಾಗ ಬೇಕಾದರೂ ಚುನಾವಣೆಗೆ ಸಿದ್ದ. ಚುನಾವಣಾ ಆಯೋಗ ಚುನಾವಣೆ ದಿನ ಘೋಷಣೆ ಮಾಡಬೇಕು. ಈ ಮೂಲಕ ಭ್ರಷ್ಟಾಚಾರ ಕೊನೆಗೊಳಿಸಬೇಕು. ನಮ್ಮ ಹಿಂದಿನ ಸಮೀಕ್ಷೆಯಲ್ಲಿ ನಮಗೆ 134 ಸ್ಥಾನಗಳು ಇದ್ದವು. ಈಗಿನ ಸಮೀಕ್ಷೆಯಲ್ಲಿ ಅದು 140ಕ್ಕೆ ಏರಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>