ಕಲಬುರಗಿ: ‘ಶ್ರೀಶೈಲದಲ್ಲಿ ರಾಜ್ಯದ ಸುಮಾರು 25 ಲಕ್ಷ ಜನ ಭಕ್ತರು ಬೀಡುಬಿಟ್ಟಿದ್ದು, ಅವರನ್ನು ವಾಪಸ್ ಹೋಗು ಎಂದರೆ ತಕ್ಷಣಕ್ಕೆ ಹೋಗುವುದು ಅಸಾಧ್ಯ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕರ್ನಾಟಕ ಸರ್ಕಾರವು ಶ್ರೀಶೈಲದಲ್ಲಿಯ ರಾಜ್ಯದ ಭಕ್ತರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಕಲಬುರಗಿ ಮತ್ತುಶ್ರೀಶೈಲ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದರು.