ಇವರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಬಗ್ಗೆ 2010 ಮಾರ್ಚ್ 24ರಂದು ಪ್ರಕರಣ ದಾಖಲಾಗಿತ್ತು. ಆಗಿನ ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಸದಾನಂದ ವೆರ್ಣೇಕರ್ ಅವರು ನೀಡಿದ ದೂರಿನಂತೆ, ಡಿವೈಎಸ್ಪಿ ವಿಠಲದಾಸ್ ಪೈ ಅವರು ಪ್ರಕರಣದ ತನಿಖೆ ನಡೆಸಿ, 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತದ ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪಾಡಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.