ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಜೂನ್ನಿಂದ ಸೆಪ್ಟೆಂಬರ್ 28ರವರೆಗೆ ನಾಲ್ಕು ತಿಂಗಳಲ್ಲಿ 450.53 ಟಿಎಂಸಿ ಅಡಿ ನೀರು ಕಾವೇರಿ ನದಿಪಾತ್ರದಿಂದ ತಮಿಳುನಾಡಿಗೆ ಹರಿದುಹೋಗಿದೆ. ಆದೇಶದ ಪ್ರಕಾರ 177 ಟಿಎಂಸಿ ಅಡಿ ನೀರು ಹರಿಸಬೇಕಿತ್ತು. ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದ್ದು, ತಮಿಳುನಾಡಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಹೋಗಿದೆ. ಹೆಚ್ಚುವರಿ ನೀರು ಬಳಸಿಕೊಳ್ಳಲು ಉಭಯ ರಾಜ್ಯಗಳಿಗೆ ಸಾಧ್ಯವಾಗಿಲ್ಲ. ಈ ಕಾರಣಕ್ಕಾಗಿಯೇ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಮುಂದಾಗಿದ್ದೇವೆ’
ಎಂದರು.