ನಗರದ ಮೌರ್ಯ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷಗಳ ನಾಯಕ ಸಿದ್ದರಾಮಯದಯ ಮಾತನಾಡಿ, 'ಹಿಂದುಳಿದ ವರ್ಗಗಳ ಸುಮಾರು 16 ಅಭಿವೃದ್ಧಿ ನಿಗಮಗಳ ಪೈಕಿ ಬಹುತೇಕ ನಾನೇ ಮಾಡಿದ್ದೇನೆ. ಎರಡು ಹೊಸ ನಿಗಮಗಳಾದ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರಿಗೆ ಎರಡು ನಿಗಮ ಮಾಡಿದರು. ಇದನ್ನು ನಾನು ಸ್ವಾಗತಿಸುತ್ತೇನೆ. ಆದರೆ, ಈ ಎರಡು ನಿಗಮಗಳಿಗೆ ತಲಾ ₹500 ಕೋಟಿ ಕೊಟ್ಟಿದ್ದಾರೆ. ಉಳಿದ 14 ನಿಗಮಗಳಿಗೆ ಕೇವಲ ₹500 ಕೋಟಿ ಕೊಟ್ಟಿದ್ದಾರೆ. ಇದು ಹಿಂದುಳಿದ ಜಾತಿಗಳಿಗೆ ಮಾಡಿದ ದ್ರೋಹ' ಎಂದರು.