‘ಪಂಚಮಸಾಲಿ ಸಮಾಜ ಎಲ್ಲರನ್ನೂ ನಂಬುವ ಸಮಾಜ. ಹಿಂದೆ ಬಿ.ಎಸ್. ಯಡಿಯೂರಪ್ಪ ಅವರನ್ನು ನಂಬಿತ್ತು. ಅವರು ಕೈಕೊಟ್ಟರು. ಈಗ ಬಸವರಾಜ ಬೊಮ್ಮಾಯಿ ಅವರನ್ನು ನಂಬಿದ್ದೇವೆ. ಪಂಚಮಸಾಲಿ, ಗೌಡ ಲಿಂಗಾಯತ, ಮಲೇಗೌಡ, ದೀಕ್ಷಾ ಲಿಂಗಾಯತರನ್ನು ಒಳಗೊಂಡ ಈ ಸಮಾಜಕ್ಕೆ 2ಎ ನೀಡಬೇಕು. ಅ.1ರಂದು ಬೆಂಗಳೂರಿ
ನಲ್ಲಿ ಜೆ.ಎಚ್. ಪಟೇಲ್ ಜನ್ಮದಿನಾಚರಣೆ, ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲಿ ಮುಖ್ಯಮಂತ್ರಿ ಅಥವಾ ಅವರ ಪ್ರತಿನಿಧಿಗಳು ಬಂದು ಮೀಸಲಾತಿ ಬಗ್ಗೆ ಸ್ಪಷ್ಟಪಡಿಸಬೇಕು’ ಎಂದರು. ‘2ಎ ಮೀಸಲಾತಿ ನೀಡಿದರೆ ಮುಖ್ಯಮಂತ್ರಿ ಅವರನ್ನು ಕಲ್ಲುಸಕ್ಕರೆಯಲ್ಲಿ ತುಲಾಭಾರ ಮಾಡಿ ಸನ್ಮಾನಿಸಲಾಗುವುದು. ಜತೆಗೆ ಕಿತ್ತೂರು ರಾಣಿ ಚನ್ನಮ್ಮರ ಫೋಟೊ ಜತೆಗೆ ಬೊಮ್ಮಾಯಿ ಅವರ ಫೋಟೊ ಇಟ್ಟು ಗೌರವಿಸಲಾಗುವುದು’ ಎಂದರು.