ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ವಾಮೀಜಿ, ‘ನ. 2ರಂದು ಸಂಜೆ 6 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಜಿಕೆ ನುಡಿ–ಚಿತ್ರ ಟಂಕಸಾಲೆ (ಡಿಜಿಟಲ್ ಎವಿ ರೆಕಾರ್ಡಿಂಗ್ ಸ್ಟುಡಿಯೊ) ಉದ್ಘಾಟಿಸುವರು. ಬೆಂಗಳೂರಿನ ರಾಷ್ಟ್ರೀಯ ರಂಗಶಾಲೆ ನಿರ್ದೇಶಕಿ ವೀಣಾ ಶರ್ಮಾ ಭೂಸನೂರಮಠ ಅವರು ಶಿವಸಂಚಾರ ನಾಟಕಗಳನ್ನು ಉದ್ಘಾಟಿಸುವರು. ಕವಿ ಡಾ.ದೊಡ್ದರಂಗೇಗೌಡ ಕನ್ನಡ ರಾಜ್ಯೋತ್ಸವ ಉದ್ಘಾಟಿಸುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ನಾಟಕೋತ್ಸವ ಉದ್ಘಾಟಿಸುವರು. ನ. 7ರಂದು ನಡೆಯುವ ಶಿವಕುಮಾರ ಪ್ರಶಸ್ತಿ ಪ್ರದಾನ ಹಾಗೂ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.