<p><strong>ಮಂಗಳೂರು:</strong> ತೌತೆ ಚಂಡಮಾರತದ ಹೊಡೆತದಿಂದ ಸಮುದ್ರದಲ್ಲಿ ಅತಂತ್ರರಾಗಿದ್ದ ಕೇರಳದ ಕಣ್ಣೂರು ಜಿಲ್ಲೆಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಹಡಗು ವಿಕ್ರಮ್ ಮೂಲಕ ರಕ್ಷಿಸಲಾಗಿದೆ.</p>.<p>ಮೀನುಗಾರಿಕಾ ಬೋಟ್ ಬದ್ರಿಯಾ ಕೇರಳ ತೀರದಿಂದ 10 ನಾಟಿಕಲ್ ಮೈಲಿ ದೂರದಲ್ಲಿ ಎಂಜಿನ್ ಕೆಟ್ಟು ನಿಂತಿತ್ತು. ಮೇ 14ರ ಮಧ್ಯರಾತ್ರಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ತಮಿಳುನಾಡಿನ ಒಂದು ಬೋಟ್ ಹಾಗೂ ಕೇರಳದ ಇನ್ನೊಂದು ಬೋಟ್ಗಾಗಿ ಹುಡುಕಾಟ ನಡೆಸಲಾಗಿತ್ತು. ಆಗ ವಿಕ್ರಂ ಹಡಗಿನ ಸಿಬ್ಬಂದಿ ಈ ಮೀನುಗಾರಿಕಾ ಬೋಟ್ ಪತ್ತೆ ಮಾಡಿ, ಮೀನುಗಾರರನ್ನೂ ರಕ್ಷಿಸಿದ್ದಾರೆ.</p>.<p>ಮೀನುಗಾರರಾದ ಅರುಣ್ (36), ಎಸ್. ಫ್ರಾನ್ಸಿಸ್ (58), ಸುರೀಂದರ್ (64) ಅವರನ್ನು ರಕ್ಷಿಸಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ. ಸಂಸದ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ಮೀನುಗಾರರನ್ನು ಕೇರಳ ಸರ್ಕಾರದ ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕರಾವಳಿ ಕಾವಲು ಪಡೆ ಕಮಾಂಡರ್ ವೆಂಕಟೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ತೌತೆ ಚಂಡಮಾರತದ ಹೊಡೆತದಿಂದ ಸಮುದ್ರದಲ್ಲಿ ಅತಂತ್ರರಾಗಿದ್ದ ಕೇರಳದ ಕಣ್ಣೂರು ಜಿಲ್ಲೆಯ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಹಡಗು ವಿಕ್ರಮ್ ಮೂಲಕ ರಕ್ಷಿಸಲಾಗಿದೆ.</p>.<p>ಮೀನುಗಾರಿಕಾ ಬೋಟ್ ಬದ್ರಿಯಾ ಕೇರಳ ತೀರದಿಂದ 10 ನಾಟಿಕಲ್ ಮೈಲಿ ದೂರದಲ್ಲಿ ಎಂಜಿನ್ ಕೆಟ್ಟು ನಿಂತಿತ್ತು. ಮೇ 14ರ ಮಧ್ಯರಾತ್ರಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ತಮಿಳುನಾಡಿನ ಒಂದು ಬೋಟ್ ಹಾಗೂ ಕೇರಳದ ಇನ್ನೊಂದು ಬೋಟ್ಗಾಗಿ ಹುಡುಕಾಟ ನಡೆಸಲಾಗಿತ್ತು. ಆಗ ವಿಕ್ರಂ ಹಡಗಿನ ಸಿಬ್ಬಂದಿ ಈ ಮೀನುಗಾರಿಕಾ ಬೋಟ್ ಪತ್ತೆ ಮಾಡಿ, ಮೀನುಗಾರರನ್ನೂ ರಕ್ಷಿಸಿದ್ದಾರೆ.</p>.<p>ಮೀನುಗಾರರಾದ ಅರುಣ್ (36), ಎಸ್. ಫ್ರಾನ್ಸಿಸ್ (58), ಸುರೀಂದರ್ (64) ಅವರನ್ನು ರಕ್ಷಿಸಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ. ಸಂಸದ ನಳಿನ್ಕುಮಾರ್ ಕಟೀಲ್ ಸಮ್ಮುಖದಲ್ಲಿ ಮೀನುಗಾರರನ್ನು ಕೇರಳ ಸರ್ಕಾರದ ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕರಾವಳಿ ಕಾವಲು ಪಡೆ ಕಮಾಂಡರ್ ವೆಂಕಟೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>