<p><strong>ಚಿಕ್ಕಬಳ್ಳಾಪುರ: </strong>ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ 32 ಮಕ್ಕಳು ಪರರ ಆಶ್ರಯಕ್ಕೆ ಎದುರು ನೋಡುವಂತಾಗಿದೆ. ಇವರಲ್ಲಿ ಮೂರು ಮಕ್ಕಳು ತಂದೆ, ತಾಯಿಯನ್ನು ಕಳೆದುಕೊಂಡು ಅನಾಥರಾದರೆ, 29 ಮಕ್ಕಳು ತಮ್ಮ ಭವಿಷ್ಯ ರೂಪಿಸುವ ‘ಆಧಾರ’ ಎನ್ನುವಂತಿದ್ದ ತಂದೆಯನ್ನೇ ಕಳೆದುಕೊಂಡಿದ್ದಾರೆ.</p>.<p>ತಮ್ಮ ಮನೆಗಳಲ್ಲಿ ದುಡಿಯುವವರನ್ನು ಕಳೆದುಕೊಂಡಿರುವ ಈ ಮಕ್ಕಳು ವಸತಿ, ಶಿಕ್ಷಣ, ಸುರಕ್ಷೆಗಾಗಿ ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 140 ಮಕ್ಕಳು ಕೋವಿಡ್ ಸೋಂಕಿನಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳ ಪೋಷಕರು ಸರ್ಕಾರಿ ನೌಕರಿಯಲ್ಲಿಯೂ ಇದ್ದರು. ಇವರಲ್ಲಿ 29 ಮಕ್ಕಳ ಮನೆಗಳಲ್ಲಿ ದುಡಿಮೆಗೆ ಆಧಾರವಾಗಿದ್ದವರೇ ಅಸುನೀಗಿದ್ದಾರೆ. ಈ ಕುಟುಂಬಗಳು ಆರ್ಥಿಕವಾಗಿ ತೀರಾ ಹಿಂದುಳಿದಿವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಖುದ್ದು ಮನೆಗಳಿಗೆ ಭೇಟಿ ನೀಡಿ ನಾವು ಅವರ ಸ್ಥಿತಿಗತಿ ಪರಿಶೀಲಿಸಿದ್ದೇವೆ. ಅವರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯೂ ಉತ್ತಮವಾಗಿಲ್ಲ. ಸಂಬಂಧಿಕರು ಸಹ ಈ ಮಕ್ಕಳ ನೆರವಿಗಿಲ್ಲ. ಇವರಿಗೆ ಸುರಕ್ಷೆ ಮತ್ತು ಆಶ್ರಯ ಅಗತ್ಯವಿದೆ ಎಂದರು.</p>.<p>ತಂದೆ ಮತ್ತು ತಾಯಿಯನ್ನು ಕಳೆದುಕೊಂಡು ಮೂರು ಮಕ್ಕಳನ್ನು ಅಜ್ಜ, ಅಜ್ಜಿ, ಅತ್ತೆ, ಮಾವ ಹೀಗೆ ಸಂಬಂಧಿಕರ ಆಶ್ರಯದಲ್ಲಿ ಇರಿಸಲಾಗಿದೆ. ಅವರ ಪೋಷಣೆಯ ಬಗ್ಗೆ ನಾವು ಸಹ ನಿಗಾ ಇಟ್ಟಿರುತ್ತೇವೆ. ಸುರಕ್ಷೆ ಅಗತ್ಯವಿರುವ 32 ಮಕ್ಕಳಿಗೆ ‘ಪ್ರಾಯೋಜಕತ್ವ’ ಯೋಜನೆಯಡಿ ತಿಂಗಳಿಗೆ ₹ 1 ಸಾವಿರ ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಮಕ್ಕಳು ಕಂಡು ಬಂದರೆ ಮಕ್ಕಳ ಸಹಾಯವಾಣಿ 1098, 14499 ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.</p>.<p><strong>ಅಜ್ಜಿಯ ಆಶ್ರಯದಲ್ಲಿ ಇಬ್ಬರು ಮಕ್ಕಳು</strong><br />ಅಜ್ಜಿಯ ಆಶ್ರಯದಲ್ಲಿ ಇಬ್ಬರು ಮಕ್ಕಳು ಜಿಲ್ಲೆಯಲ್ಲಿ ಮೂರು ಮಕ್ಕಳು ಕೋವಿಡ್ನಿಂದ ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ತಂದೆ ಮತ್ತು ತಾಯಿಯನ್ನು ಕಳೆದುಕೊಂಡ 19 ವರ್ಷ ಹಾಗೂ 7 ವರ್ಷ ಹೆಣ್ಣು ಮಕ್ಕಳು ಗೌರಿಬಿದನೂರಿನಲ್ಲಿ ಅಜ್ಜಿಯ ಆಶ್ರಯದಲ್ಲಿ ಬೆಳೆಯುತ್ತಿದ್ದಾರೆ. ಈ ಮಕ್ಕಳ ತಂದೆ ವ್ಯಾಪಾರ ಮಾಡಿಕೊಂಡಿದ್ದರು. ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇದ್ದಾರೆ. ಆ ಕುಟುಂಬದ 7 ವರ್ಷದ ಮಗುವಿಗೆ ಯಾವುದಾದರೂ ಉತ್ತಮ ಶಾಲೆಯಲ್ಲಿ ಶೈಕ್ಷಣಿಕ ಸೌಲಭ್ಯ ಕಲ್ಪಿಸಿಕೊಡಿ ಎಂದು ಕೋರಿದ್ದಾರೆ ಎಂದು ಮಹಮ್ಮದ್ ಉಸ್ಮಾನ್ ತಿಳಿಸಿದರು. ಚಿಂತಾಮಣಿ ತಾಲ್ಲೂಕಿನಲ್ಲಿ 13 ಮತ್ತು 15 ವರ್ಷದ ಸಹೋದರಿಯರ ತಂದೆ, ತಾಯಿ ಮೃತಪಟ್ಟಿದ್ದಾರೆ. ಸದ್ಯ ಈ ಹೆಣ್ಣು ಮಕ್ಕಳು ಸೋದರ ಮಾವನ ಆಶ್ರಯದಲ್ಲಿ ಇದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ 32 ಮಕ್ಕಳು ಪರರ ಆಶ್ರಯಕ್ಕೆ ಎದುರು ನೋಡುವಂತಾಗಿದೆ. ಇವರಲ್ಲಿ ಮೂರು ಮಕ್ಕಳು ತಂದೆ, ತಾಯಿಯನ್ನು ಕಳೆದುಕೊಂಡು ಅನಾಥರಾದರೆ, 29 ಮಕ್ಕಳು ತಮ್ಮ ಭವಿಷ್ಯ ರೂಪಿಸುವ ‘ಆಧಾರ’ ಎನ್ನುವಂತಿದ್ದ ತಂದೆಯನ್ನೇ ಕಳೆದುಕೊಂಡಿದ್ದಾರೆ.</p>.<p>ತಮ್ಮ ಮನೆಗಳಲ್ಲಿ ದುಡಿಯುವವರನ್ನು ಕಳೆದುಕೊಂಡಿರುವ ಈ ಮಕ್ಕಳು ವಸತಿ, ಶಿಕ್ಷಣ, ಸುರಕ್ಷೆಗಾಗಿ ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 140 ಮಕ್ಕಳು ಕೋವಿಡ್ ಸೋಂಕಿನಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳ ಪೋಷಕರು ಸರ್ಕಾರಿ ನೌಕರಿಯಲ್ಲಿಯೂ ಇದ್ದರು. ಇವರಲ್ಲಿ 29 ಮಕ್ಕಳ ಮನೆಗಳಲ್ಲಿ ದುಡಿಮೆಗೆ ಆಧಾರವಾಗಿದ್ದವರೇ ಅಸುನೀಗಿದ್ದಾರೆ. ಈ ಕುಟುಂಬಗಳು ಆರ್ಥಿಕವಾಗಿ ತೀರಾ ಹಿಂದುಳಿದಿವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಖುದ್ದು ಮನೆಗಳಿಗೆ ಭೇಟಿ ನೀಡಿ ನಾವು ಅವರ ಸ್ಥಿತಿಗತಿ ಪರಿಶೀಲಿಸಿದ್ದೇವೆ. ಅವರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯೂ ಉತ್ತಮವಾಗಿಲ್ಲ. ಸಂಬಂಧಿಕರು ಸಹ ಈ ಮಕ್ಕಳ ನೆರವಿಗಿಲ್ಲ. ಇವರಿಗೆ ಸುರಕ್ಷೆ ಮತ್ತು ಆಶ್ರಯ ಅಗತ್ಯವಿದೆ ಎಂದರು.</p>.<p>ತಂದೆ ಮತ್ತು ತಾಯಿಯನ್ನು ಕಳೆದುಕೊಂಡು ಮೂರು ಮಕ್ಕಳನ್ನು ಅಜ್ಜ, ಅಜ್ಜಿ, ಅತ್ತೆ, ಮಾವ ಹೀಗೆ ಸಂಬಂಧಿಕರ ಆಶ್ರಯದಲ್ಲಿ ಇರಿಸಲಾಗಿದೆ. ಅವರ ಪೋಷಣೆಯ ಬಗ್ಗೆ ನಾವು ಸಹ ನಿಗಾ ಇಟ್ಟಿರುತ್ತೇವೆ. ಸುರಕ್ಷೆ ಅಗತ್ಯವಿರುವ 32 ಮಕ್ಕಳಿಗೆ ‘ಪ್ರಾಯೋಜಕತ್ವ’ ಯೋಜನೆಯಡಿ ತಿಂಗಳಿಗೆ ₹ 1 ಸಾವಿರ ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಮಕ್ಕಳು ಕಂಡು ಬಂದರೆ ಮಕ್ಕಳ ಸಹಾಯವಾಣಿ 1098, 14499 ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.</p>.<p><strong>ಅಜ್ಜಿಯ ಆಶ್ರಯದಲ್ಲಿ ಇಬ್ಬರು ಮಕ್ಕಳು</strong><br />ಅಜ್ಜಿಯ ಆಶ್ರಯದಲ್ಲಿ ಇಬ್ಬರು ಮಕ್ಕಳು ಜಿಲ್ಲೆಯಲ್ಲಿ ಮೂರು ಮಕ್ಕಳು ಕೋವಿಡ್ನಿಂದ ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ತಂದೆ ಮತ್ತು ತಾಯಿಯನ್ನು ಕಳೆದುಕೊಂಡ 19 ವರ್ಷ ಹಾಗೂ 7 ವರ್ಷ ಹೆಣ್ಣು ಮಕ್ಕಳು ಗೌರಿಬಿದನೂರಿನಲ್ಲಿ ಅಜ್ಜಿಯ ಆಶ್ರಯದಲ್ಲಿ ಬೆಳೆಯುತ್ತಿದ್ದಾರೆ. ಈ ಮಕ್ಕಳ ತಂದೆ ವ್ಯಾಪಾರ ಮಾಡಿಕೊಂಡಿದ್ದರು. ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇದ್ದಾರೆ. ಆ ಕುಟುಂಬದ 7 ವರ್ಷದ ಮಗುವಿಗೆ ಯಾವುದಾದರೂ ಉತ್ತಮ ಶಾಲೆಯಲ್ಲಿ ಶೈಕ್ಷಣಿಕ ಸೌಲಭ್ಯ ಕಲ್ಪಿಸಿಕೊಡಿ ಎಂದು ಕೋರಿದ್ದಾರೆ ಎಂದು ಮಹಮ್ಮದ್ ಉಸ್ಮಾನ್ ತಿಳಿಸಿದರು. ಚಿಂತಾಮಣಿ ತಾಲ್ಲೂಕಿನಲ್ಲಿ 13 ಮತ್ತು 15 ವರ್ಷದ ಸಹೋದರಿಯರ ತಂದೆ, ತಾಯಿ ಮೃತಪಟ್ಟಿದ್ದಾರೆ. ಸದ್ಯ ಈ ಹೆಣ್ಣು ಮಕ್ಕಳು ಸೋದರ ಮಾವನ ಆಶ್ರಯದಲ್ಲಿ ಇದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>