<p><strong>ಬೆಂಗಳೂರು: </strong>ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು' 'ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ' ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.</p>.<p>ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಅಭಿವೃದ್ಧಿ ಕುಂಠಿತ ಆಗದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ವರಮಾನ ಸಂಗ್ರಹದಲ್ಲಿ ₹30,000 ಕೋಟಿ ಕೊರತೆ ಆಗಲಿದೆ. ಆದರೂ, ಸಾಲ ಪಡೆದು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂದರು.</p>.<p>ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮೊದಲ ಸ್ಥಾನಕ್ಕೇರಿಸುವುದೇ ತಮ್ಮ ಗುರಿ. ಬೇರೆ ಯಾವ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.</p>.<p><strong>ಗೊಂದಲ ಇಲ್ಲ</strong>: ನಾಯಕತ್ವ ಬದಲಾವಣೆ ಕುರಿತು ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ' ನಮ್ಮ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಮಾತ್ರ ಗೊಂದಲ ಇದೆ' ಎಂದರು.</p>.<p>ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು' 'ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ' ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.</p>.<p>ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಅಭಿವೃದ್ಧಿ ಕುಂಠಿತ ಆಗದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ವರಮಾನ ಸಂಗ್ರಹದಲ್ಲಿ ₹30,000 ಕೋಟಿ ಕೊರತೆ ಆಗಲಿದೆ. ಆದರೂ, ಸಾಲ ಪಡೆದು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂದರು.</p>.<p>ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮೊದಲ ಸ್ಥಾನಕ್ಕೇರಿಸುವುದೇ ತಮ್ಮ ಗುರಿ. ಬೇರೆ ಯಾವ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.</p>.<p><strong>ಗೊಂದಲ ಇಲ್ಲ</strong>: ನಾಯಕತ್ವ ಬದಲಾವಣೆ ಕುರಿತು ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ' ನಮ್ಮ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಮಾತ್ರ ಗೊಂದಲ ಇದೆ' ಎಂದರು.</p>.<p>ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>