‘ಕರ್ನಾಟಕದಲ್ಲಿರುವುದು ದೇಶದ ಅತಿಭ್ರಷ್ಟ ಸರ್ಕಾರ’ ಎಂಬ ರಾಹುಲ್ ಹೇಳಿಕೆ ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಮಹಾತ್ಮ ಗಾಂಧಿ ಜಯಂತಿಯ ಸಂದರ್ಭದಲ್ಲಿ ನಕಲಿ ಗಾಂಧಿಗಳ ಕುರಿತು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಲ್ಲರೂ ಜಾಮೀನಿನ ಮೇಲಿದ್ದಾರೆ. ಇಡೀ ಪಕ್ಷವೇ ಜಾಮೀನಿನ ಮೇಲಿದೆ’ ಎಂದರು.