ಕಲಬುರಗಿ, ಬೀದರ್, ಕೊಪ್ಪಳ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಘಟನೆಗಳಿಗೆ ಸೇರಿದ್ದ ಆಸ್ತಿಗಳನ್ನು ಗುರುತಿಸಿ ಶೋಧ ನಡೆಸಿದರು. ತಾಲ್ಲೂಕು ದಂಡಾಧಿಕಾರಿ ಸಮ್ಮುಖದಲ್ಲಿ ಕಚೇರಿಗಳಿಗೆ ಬೀಗಮುದ್ರೆ ಹಾಕಿದರು.