<p><strong>ಬೆಂಗಳೂರು:</strong> ‘ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ ಅಡಿ ನಗರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ ಏಳು ಅಥವಾ ಎಂಟು ತಿಂಗಳಲ್ಲಿ 46,499 ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>.<p>ಇದಕ್ಕಾಗಿ ಈಗಾಗಲೇ 316 ಎಕರೆ ಪ್ರದೇಶದಲ್ಲಿ 46,499 ಮನೆಗಳ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಹರಾಜಿಗೆ ಗುರುತಿಸಲಾಗಿದ್ದ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಮೂಲಸೌಕರ್ಯ ಒದಗಿಸಲು ಮುಖ್ಯಮಂತ್ರಿಯವರು ₹500 ಕೋಟಿ ಒದಗಿಸಿದ್ದಾರೆ. ಈ ಹಿಂದೆ ಫ್ಲಾಟ್ಗೆ ₹6.50 ಲಕ್ಷದಿಂದ ₹7 ಲಕ್ಷ ಎಂದು ನಿಗದಿ ಮಾಡಲಾಗಿತ್ತು. ಆದರೆ, ಹೆಚ್ಚುವರಿ ಮಹಡಿಗಳ ವೆಚ್ಚ ಏರಿಕೆ ಆಗಿರುವುದರಿಂದ ₹9 ಲಕ್ಷ ನಿಗದಿ ಮಾಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಬೆಲೆ ಅಂತಿಮಗೊಳಿಸಲಾಗುವುದು ಎಂದರು.<br /><br />ಮನೆಗಳ ಹಂಚಿಕೆಯಲ್ಲಿ ಸ್ಥಳೀಯರಿಗೆ ಶೇ 50 ರಷ್ಟು ಕಾಯ್ದಿರಿಸಿ ಉಳಿದ ಮನೆಗಳನ್ನು ಕೋರಿಕೆ ಮೇರೆಗೆ ಹಂಚಿಕೆ ಮಾಡಲಾಗುವುದು. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಪ್ರತಿ ತಿಂಗಳು ನಗರದ ಸಚಿವರು ಮತ್ತು ಶಾಸಕರ ಜತೆ ಸಭೆ ನಡೆಸಲಾಗುವುದು ಎಂದು ಸೋಮಣ್ಣ ಹೇಳಿದರು.</p>.<p>‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಗರದಲ್ಲಿ ₹3,800 ಕೋಟಿ ವೆಚ್ಚದಲ್ಲಿ 2.53 ಲಕ್ಷ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಿದ್ದೇವೆ. ಅಲ್ಲದೆ, ಹುಬ್ಬಳ್ಳಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ 35,999 ಫಲಾನುಭವಿಗಳಿಗೆ ಸದ್ಯದಲ್ಲೇ ಹಕ್ಕು ಪತ್ರಗಳನ್ನು ವಿತರಿಸುತ್ತೇವೆ’ ಎಂದು ತಿಳಿಸಿದರು.</p>.<p>‘ವಸತಿ ನಿರ್ಮಾಣದ ವಿಚಾರಗಳಲ್ಲಿ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ನೇತೃತ್ವದಸರ್ಕಾರಗಳು ಮಾಡಿಟ್ಟಿದ್ದ ಗೊಂದಲಗಳನ್ನು ನಮ್ಮ ಸರ್ಕಾರ ಪರಿಹರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ<br />ಯವರು 5 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದು, 4 ಲಕ್ಷ ಮನೆಗಳನ್ನು ಗ್ರಾಮಾಂತರ ಪ್ರದೇಶದಲ್ಲೂ, 1 ಲಕ್ಷ ನಗರ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುವುದು. 3.50 ಲಕ್ಷ ಮನೆಗಳನ್ನು ಬಸವ ವಸತಿ ಯೋಜನೆಯಲ್ಲಿ ನಿರ್ಮಿಸಲಾಗುವುದು’ ಎಂದು ಹೇಳಿದರು.</p>.<p>‘ವಸತಿ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಯಾವುದೇ ನೋಟಿಸ್ ಬಂದಿಲ್ಲ. ₹200 ಕೋಟಿ ಮೊತ್ತದ ಟೆಂಡರ್ ಏನಾಗಿದೆ ಎಂಬ ಮಾಹಿತಿಗಳನ್ನು ಕೇಳಿ ಪತ್ರ ಬಂದಿದೆ.ಟೆಂಡರ್ಪ್ರಕ್ರಿಯೆ ನಡೆಸುತ್ತಿರುವುದು ಸರ್ಕಾರದ ಮುಖ್ಯ ಕಾರ್ಯದರ್ಶಿ ಇನ್ನೂ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ.ಕೆಲವರು ನನ್ನನ್ನು ಗುರಿಯಾಗಿಸಿ ಷಡ್ಯಂತ್ರ ನಡೆಸಿದ್ದಾರೆ’ ಎಂದು ಹೇಳಿದರು.</p>.<p><strong>ಫ್ಲ್ಯಾಟ್ ಬೆಲೆ lಪರಿಷ್ಕೃತ ಬೆಲೆ–₹9 ಲಕ್ಷ</strong></p>.<p>ಎಸ್ಸಿ/ಎಸ್ಟಿ ವರ್ಗ:ಕೇಂದ್ರ ಸರ್ಕಾರದಿಂದ ₹ 1.50 ಲಕ್ಷ, ರಾಜ್ಯ ಸರ್ಕಾರ ₹2 ಲಕ್ಷ, ಎಸ್ಸಿಪಿ–ಟಿಎಸ್ಪಿ ಯೋಜನೆಯಿಂದ ತಲಾ ₹50 ಸಾವಿರ, ಫಲಾನುಭವಿಗಳು ಪಾವತಿಸಬೇಕಾಗಿದ್ದು ₹5 ಲಕ್ಷ. ಇದರಲ್ಲಿ ₹1 ಲಕ್ಷ ಕಟ್ಟಿದರೆ, ಉಳಿಯುವ ₹4 ಲಕ್ಷವನ್ನು ಬ್ಯಾಂಕ್ನಿಂದ ಸಾಲ ಸೌಲಭ್ಯ.</p>.<p>ಸಾಮಾನ್ಯ ವರ್ಗ: ಕೇಂದ್ರ ಸರ್ಕಾರದಿಂದ ₹1.50 ಲಕ್ಷ, ರಾಜ್ಯ ಸರ್ಕಾರ ₹1.20 ಲಕ್ಷ. ಫಲಾನುಭವಿ ಪಾವತಿಸಬೇಕಾದ ಮೊತ್ತ ₹5.50 ಲಕ್ಷ. ₹1 ಲಕ್ಷ ಠೇವಣಿ ಮಾಡಿದರೆ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಸೌಲಭ್ಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ ಅಡಿ ನಗರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮುಂದಿನ ಏಳು ಅಥವಾ ಎಂಟು ತಿಂಗಳಲ್ಲಿ 46,499 ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>.<p>ಇದಕ್ಕಾಗಿ ಈಗಾಗಲೇ 316 ಎಕರೆ ಪ್ರದೇಶದಲ್ಲಿ 46,499 ಮನೆಗಳ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಹರಾಜಿಗೆ ಗುರುತಿಸಲಾಗಿದ್ದ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಮೂಲಸೌಕರ್ಯ ಒದಗಿಸಲು ಮುಖ್ಯಮಂತ್ರಿಯವರು ₹500 ಕೋಟಿ ಒದಗಿಸಿದ್ದಾರೆ. ಈ ಹಿಂದೆ ಫ್ಲಾಟ್ಗೆ ₹6.50 ಲಕ್ಷದಿಂದ ₹7 ಲಕ್ಷ ಎಂದು ನಿಗದಿ ಮಾಡಲಾಗಿತ್ತು. ಆದರೆ, ಹೆಚ್ಚುವರಿ ಮಹಡಿಗಳ ವೆಚ್ಚ ಏರಿಕೆ ಆಗಿರುವುದರಿಂದ ₹9 ಲಕ್ಷ ನಿಗದಿ ಮಾಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಬೆಲೆ ಅಂತಿಮಗೊಳಿಸಲಾಗುವುದು ಎಂದರು.<br /><br />ಮನೆಗಳ ಹಂಚಿಕೆಯಲ್ಲಿ ಸ್ಥಳೀಯರಿಗೆ ಶೇ 50 ರಷ್ಟು ಕಾಯ್ದಿರಿಸಿ ಉಳಿದ ಮನೆಗಳನ್ನು ಕೋರಿಕೆ ಮೇರೆಗೆ ಹಂಚಿಕೆ ಮಾಡಲಾಗುವುದು. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಪ್ರತಿ ತಿಂಗಳು ನಗರದ ಸಚಿವರು ಮತ್ತು ಶಾಸಕರ ಜತೆ ಸಭೆ ನಡೆಸಲಾಗುವುದು ಎಂದು ಸೋಮಣ್ಣ ಹೇಳಿದರು.</p>.<p>‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಗರದಲ್ಲಿ ₹3,800 ಕೋಟಿ ವೆಚ್ಚದಲ್ಲಿ 2.53 ಲಕ್ಷ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಿದ್ದೇವೆ. ಅಲ್ಲದೆ, ಹುಬ್ಬಳ್ಳಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ 35,999 ಫಲಾನುಭವಿಗಳಿಗೆ ಸದ್ಯದಲ್ಲೇ ಹಕ್ಕು ಪತ್ರಗಳನ್ನು ವಿತರಿಸುತ್ತೇವೆ’ ಎಂದು ತಿಳಿಸಿದರು.</p>.<p>‘ವಸತಿ ನಿರ್ಮಾಣದ ವಿಚಾರಗಳಲ್ಲಿ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ನೇತೃತ್ವದಸರ್ಕಾರಗಳು ಮಾಡಿಟ್ಟಿದ್ದ ಗೊಂದಲಗಳನ್ನು ನಮ್ಮ ಸರ್ಕಾರ ಪರಿಹರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ<br />ಯವರು 5 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದು, 4 ಲಕ್ಷ ಮನೆಗಳನ್ನು ಗ್ರಾಮಾಂತರ ಪ್ರದೇಶದಲ್ಲೂ, 1 ಲಕ್ಷ ನಗರ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುವುದು. 3.50 ಲಕ್ಷ ಮನೆಗಳನ್ನು ಬಸವ ವಸತಿ ಯೋಜನೆಯಲ್ಲಿ ನಿರ್ಮಿಸಲಾಗುವುದು’ ಎಂದು ಹೇಳಿದರು.</p>.<p>‘ವಸತಿ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಯಾವುದೇ ನೋಟಿಸ್ ಬಂದಿಲ್ಲ. ₹200 ಕೋಟಿ ಮೊತ್ತದ ಟೆಂಡರ್ ಏನಾಗಿದೆ ಎಂಬ ಮಾಹಿತಿಗಳನ್ನು ಕೇಳಿ ಪತ್ರ ಬಂದಿದೆ.ಟೆಂಡರ್ಪ್ರಕ್ರಿಯೆ ನಡೆಸುತ್ತಿರುವುದು ಸರ್ಕಾರದ ಮುಖ್ಯ ಕಾರ್ಯದರ್ಶಿ ಇನ್ನೂ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ.ಕೆಲವರು ನನ್ನನ್ನು ಗುರಿಯಾಗಿಸಿ ಷಡ್ಯಂತ್ರ ನಡೆಸಿದ್ದಾರೆ’ ಎಂದು ಹೇಳಿದರು.</p>.<p><strong>ಫ್ಲ್ಯಾಟ್ ಬೆಲೆ lಪರಿಷ್ಕೃತ ಬೆಲೆ–₹9 ಲಕ್ಷ</strong></p>.<p>ಎಸ್ಸಿ/ಎಸ್ಟಿ ವರ್ಗ:ಕೇಂದ್ರ ಸರ್ಕಾರದಿಂದ ₹ 1.50 ಲಕ್ಷ, ರಾಜ್ಯ ಸರ್ಕಾರ ₹2 ಲಕ್ಷ, ಎಸ್ಸಿಪಿ–ಟಿಎಸ್ಪಿ ಯೋಜನೆಯಿಂದ ತಲಾ ₹50 ಸಾವಿರ, ಫಲಾನುಭವಿಗಳು ಪಾವತಿಸಬೇಕಾಗಿದ್ದು ₹5 ಲಕ್ಷ. ಇದರಲ್ಲಿ ₹1 ಲಕ್ಷ ಕಟ್ಟಿದರೆ, ಉಳಿಯುವ ₹4 ಲಕ್ಷವನ್ನು ಬ್ಯಾಂಕ್ನಿಂದ ಸಾಲ ಸೌಲಭ್ಯ.</p>.<p>ಸಾಮಾನ್ಯ ವರ್ಗ: ಕೇಂದ್ರ ಸರ್ಕಾರದಿಂದ ₹1.50 ಲಕ್ಷ, ರಾಜ್ಯ ಸರ್ಕಾರ ₹1.20 ಲಕ್ಷ. ಫಲಾನುಭವಿ ಪಾವತಿಸಬೇಕಾದ ಮೊತ್ತ ₹5.50 ಲಕ್ಷ. ₹1 ಲಕ್ಷ ಠೇವಣಿ ಮಾಡಿದರೆ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಸೌಲಭ್ಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>