ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

484 ಮಕ್ಕಳು ನಾಪತ್ತೆ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವರದಿ

Last Updated 2 ಆಗಸ್ಟ್ 2022, 21:15 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿನ ವಿವಿಧ ಬಾಲಮಂದಿರಗಳಿಂದ ಈವರೆಗೆ 484 ಮಕ್ಕಳು ನಾಪತ್ತೆಯಾಗಿದ್ದಾರೆ’ ಎಂದುರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಅನುಪಾಲನಾ ವರದಿ ನೀಡಿದರು. ವರದಿ ದಾಖಲಿಸಿಕೊಂಡ ನ್ಯಾಯಪೀಠ, ‘ಈ ವರದಿಯ ನಂತರ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿಯನ್ನು 4 ವಾರಗಳಲ್ಲಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿದರು.

ಸರ್ಕಾರದ ಅಧೀನದಲ್ಲಿರುವ ಬಾಲ ಮಂದಿರಗಳಿಂದ ಕೆಲ ವರ್ಷಗಳಲ್ಲಿ 141 ಮಕ್ಕಳು ನಾಪತ್ತೆಯಾಗಿದ್ದಾರೆ‘ ಎಂದು ಅರ್ಜಿದಾರರು ಆರೋಪಿಸಿದ್ದರು. ‘ನಾಪತ್ತೆಯಾದ ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ಕ್ರಮಗಳ ವರದಿ ಸಲ್ಲಿಸಿ’ ಎಂದು 2022ರ ಫೆ. 22ರಂದು ನ್ಯಾಯಪೀಠ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT