<p><strong>ಶಿರಾ</strong>:‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂಬುದನ್ನು ಅರಿತು ಆ ಪಕ್ಷದ ಅವರು ಶಾಸಕರು ಬಿಜೆಪಿಗೆ ಸೇರಲು ಸಿದ್ಧರಾಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.</p>.<p>ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಪರ ಪ್ರಚಾರ ಸಭೆಯಲ್ಲಿ ಶುಕ್ರವಾರ ಅವರು ಮಾತನಾಡಿದರು. </p>.<p>ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಪಕ್ಷದ ಬಲವೂ ಹೆಚ್ಚಲಿದೆ. ಕಾಂಗ್ರೆಸ್ನ 5 ಶಾಸಕರು ಬಿಜೆಪಿಗೆ ಬರುವುದರಿಂದ ಕಾಂಗ್ರೆಸ್ ಯಾವ ಮಟ್ಟಕ್ಕೆ ತಲುಪುತ್ತದೆ ಎನ್ನುವುದು ತಿಳಿಯದಾಗಿದೆ ಎಂದರು.</p>.<p>‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಮತ್ತು ನಾನು ಆತ್ಮೀಯರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಆಡಳಿತ ಮೆಚ್ಚಿ ಅವರು, ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಸಿದ್ದರು. ಈಗಲೂ ಅವರು ಒತ್ತಡದಿಂದ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಮತದಾರರು ಅರಿತುಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>:‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂಬುದನ್ನು ಅರಿತು ಆ ಪಕ್ಷದ ಅವರು ಶಾಸಕರು ಬಿಜೆಪಿಗೆ ಸೇರಲು ಸಿದ್ಧರಾಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.</p>.<p>ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಪರ ಪ್ರಚಾರ ಸಭೆಯಲ್ಲಿ ಶುಕ್ರವಾರ ಅವರು ಮಾತನಾಡಿದರು. </p>.<p>ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಪಕ್ಷದ ಬಲವೂ ಹೆಚ್ಚಲಿದೆ. ಕಾಂಗ್ರೆಸ್ನ 5 ಶಾಸಕರು ಬಿಜೆಪಿಗೆ ಬರುವುದರಿಂದ ಕಾಂಗ್ರೆಸ್ ಯಾವ ಮಟ್ಟಕ್ಕೆ ತಲುಪುತ್ತದೆ ಎನ್ನುವುದು ತಿಳಿಯದಾಗಿದೆ ಎಂದರು.</p>.<p>‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಮತ್ತು ನಾನು ಆತ್ಮೀಯರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಆಡಳಿತ ಮೆಚ್ಚಿ ಅವರು, ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಸಿದ್ದರು. ಈಗಲೂ ಅವರು ಒತ್ತಡದಿಂದ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಮತದಾರರು ಅರಿತುಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>