ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪರಿಣಾಮ, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಸೇತುವೆ ಬಳಿಯ ದತ್ತ ಮಂದಿರ, ಯಕ್ಸಂಬಾ ಸಮೀಪದ ಮುಲ್ಲಾನ್ಕಿಯ ಮನ್ಸೂರ್ವಲಿ ದರ್ಗಾ ಜಲಾವೃತವಾಗಿವೆ. ಜಿಲ್ಲೆಯಲ್ಲಿ ಒಟ್ಟಾರೆ 117 ಹೆಕ್ಟೇರ್ ಭತ್ತದ ಗದ್ದೆ ಜಲಾವೃತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಸಂತ್ರಸ್ತರಿಗಾಗಿ ಒಟ್ಟು ಎರಡು ಕಾಳಜಿ ಕೇಂದ್ರಗಳ್ನು ತೆರೆದಿದ್ದು, 84 ಜನರು ಆಶ್ರಯ ಪಡೆದಿದ್ದಾರೆ.