ಈ ಬಗ್ಗೆ ಅರ್ಜಿದಾರರು ಲೋಕಾ ಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ‘ಮಂಗಳವಾರ ಸಂಜೆ ಸೇಂಟ್ ಮಾರ್ಥಾಸ್ ಆಸ್ಪತ್ರೆ ವಾಹನ ನಿಲುಗಡೆ ತಾಣದ ಬಳಿ ಬಂದು ಹಣ ತಲುಪಿಸುವಂತೆ ಮಧ್ಯವರ್ತಿ ಸೂಚಿಸಿದ್ದರು. ಅಲ್ಲಿಗೆ ತೆರಳಿದ ಕಾಂತರಾಜು ₹ 5 ಲಕ್ಷ ನೀಡಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು, ರಮೇಶ್ ಅವರನ್ನು ಬಂಧಿಸಿದರು. ‘ನನ್ನದೇನೂ ತಪ್ಪಿಲ್ಲ. ತಹಶೀಲ್ದಾರ್ ವರ್ಷಾ ಅವರ ಸೂಚನೆಯಂತೆ ಹಣ ಪಡೆದಿದ್ದೇನೆ’ ಎಂದು ಮಧ್ಯವರ್ತಿ ತನಿಖಾ ತಂಡಕ್ಕೆ ಉತ್ತರಿಸಿದರು. ಅಲ್ಲಿಂದ ವಾಪಸ್ ವಿಶೇಷ ತಹಶೀಲ್ದಾರ್ ಕಚೇರಿಗೆ ಬಂದ ರಮೇಶ್, ‘ಮೇಡಂ ವ್ಯವಹಾರ ಮುಗಿದಿದೆ’ ಎಂದರು. ‘ಹಣ ಕೊಡು’ ಎಂದು ವರ್ಷಾ ₹ 5 ಲಕ್ಷ ಪಡೆದುಕೊಂಡರು’ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.