<p><strong>ಬೆಂಗಳೂರು:</strong> ಅಕ್ಟೋಬರ್ನಲ್ಲಿ ಸುರಿದ ಮಳೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದ್ದು, ಸಂಪೂರ್ಣ ಮತ್ತು ಭಾಗಶಃ ಮನೆಗಳಿಗೆ ಹಾನಿ ಆಗಿದ್ದರೆ ತಲಾ ₹ 5 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ.</p>.<p>ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅಕ್ಟೋಬರ್ವರೆಗೆ ಮಳೆ ಮತ್ತು ಪ್ರವಾಹದಿಂದ ಬಾಧಿತರಾದ ಕುಟುಂಬಗಳಿಗೆ ಅನ್ವಯವಾಗಲಿದೆ. ಉತ್ತರ ಕರ್ನಾಟಕ ಭಾಗದ ಮಣ್ಣಿನ ಮನೆಗಳ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸಮಸ್ಯಾತ್ಮಕ ಗ್ರಾಮಗಳ ಬಟ್ಟೆ– ಬರೆ ಮತ್ತು ದಿನಗಳಕೆ ವಸ್ತುಗಳಿಗೆ ಕೇಂದ್ರ ಸರ್ಕಾರ ಎಸ್ಡಿಆರ್ಎಫ್/ ಎನ್ಡಿಆರ್ಎಫ್ ಮಾರ್ಗಸೂಚಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ ₹3,800 ನಿಗದಿ ಮಾಡಿದೆ. ರಾಜ್ಯ ಸರ್ಕಾರದ ವತಿಯಿಂದ ₹6,200 ಸೇರಿಸಿ ಒಟ್ಟು ₹10,000 ಪರಿಹಾರ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ಹಾನಿಗೀಡಾದ ಮನೆಗಳಿಗೆ ಈ ಕೆಳಕಂಡಂತೆ ಪರಿಹಾರ ಪ್ರಕಟಿಸಲಾಗಿದೆ.</p>.<p>* ಶೇ75 ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿ ಆಗಿದ್ದರೆ( ’ಎ’ ವರ್ಗಕ್ಕೆ) ₹ 5 ಲಕ್ಷ</p>.<p>* ಶೇ 25 ರಿಂದ ಶೇ 75 ರಷ್ಟು ಭಾಗಶಃ ಹಾನಿ ಆಗಿದ್ದರೆ(ಬಿ ವರ್ಗ) (ಕೆಡವಿ ಹೊಸದಾಗಿ ನಿರ್ಮಿಸಲು) ₹5 ಲಕ್ಷ</p>.<p>* ಶೇ 25 ರಿಂದ ಶೇ 75 ರಷ್ಟು ಮನೆ ಹಾನಿ ಆಗಿದ್ದು, ದುರಸ್ಥಿಗೆ ₹ 3 ಲಕ್ಷ ಹಾಗೂ ಶೇ 15 ರಿಂದ ಶೇ 25 ರಷ್ಟು ಅಂದರೆ, ಅಲ್ಪಸ್ವಲ್ಪ ಹಾನಿ ಆಗಿದ್ದರೆ ಅದರ ದುರಸ್ಥಿಗೆ ₹50 ಸಾವಿರ ನೀಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಕ್ಟೋಬರ್ನಲ್ಲಿ ಸುರಿದ ಮಳೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದ್ದು, ಸಂಪೂರ್ಣ ಮತ್ತು ಭಾಗಶಃ ಮನೆಗಳಿಗೆ ಹಾನಿ ಆಗಿದ್ದರೆ ತಲಾ ₹ 5 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ.</p>.<p>ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅಕ್ಟೋಬರ್ವರೆಗೆ ಮಳೆ ಮತ್ತು ಪ್ರವಾಹದಿಂದ ಬಾಧಿತರಾದ ಕುಟುಂಬಗಳಿಗೆ ಅನ್ವಯವಾಗಲಿದೆ. ಉತ್ತರ ಕರ್ನಾಟಕ ಭಾಗದ ಮಣ್ಣಿನ ಮನೆಗಳ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸಮಸ್ಯಾತ್ಮಕ ಗ್ರಾಮಗಳ ಬಟ್ಟೆ– ಬರೆ ಮತ್ತು ದಿನಗಳಕೆ ವಸ್ತುಗಳಿಗೆ ಕೇಂದ್ರ ಸರ್ಕಾರ ಎಸ್ಡಿಆರ್ಎಫ್/ ಎನ್ಡಿಆರ್ಎಫ್ ಮಾರ್ಗಸೂಚಿಯಲ್ಲಿ ಪ್ರತಿ ಕುಟುಂಬಕ್ಕೆ ತಲಾ ₹3,800 ನಿಗದಿ ಮಾಡಿದೆ. ರಾಜ್ಯ ಸರ್ಕಾರದ ವತಿಯಿಂದ ₹6,200 ಸೇರಿಸಿ ಒಟ್ಟು ₹10,000 ಪರಿಹಾರ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ಹಾನಿಗೀಡಾದ ಮನೆಗಳಿಗೆ ಈ ಕೆಳಕಂಡಂತೆ ಪರಿಹಾರ ಪ್ರಕಟಿಸಲಾಗಿದೆ.</p>.<p>* ಶೇ75 ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿ ಆಗಿದ್ದರೆ( ’ಎ’ ವರ್ಗಕ್ಕೆ) ₹ 5 ಲಕ್ಷ</p>.<p>* ಶೇ 25 ರಿಂದ ಶೇ 75 ರಷ್ಟು ಭಾಗಶಃ ಹಾನಿ ಆಗಿದ್ದರೆ(ಬಿ ವರ್ಗ) (ಕೆಡವಿ ಹೊಸದಾಗಿ ನಿರ್ಮಿಸಲು) ₹5 ಲಕ್ಷ</p>.<p>* ಶೇ 25 ರಿಂದ ಶೇ 75 ರಷ್ಟು ಮನೆ ಹಾನಿ ಆಗಿದ್ದು, ದುರಸ್ಥಿಗೆ ₹ 3 ಲಕ್ಷ ಹಾಗೂ ಶೇ 15 ರಿಂದ ಶೇ 25 ರಷ್ಟು ಅಂದರೆ, ಅಲ್ಪಸ್ವಲ್ಪ ಹಾನಿ ಆಗಿದ್ದರೆ ಅದರ ದುರಸ್ಥಿಗೆ ₹50 ಸಾವಿರ ನೀಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>