ಹುಬ್ಬಳ್ಳಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹50 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಕಿತ್ತೂರು ಚನ್ನಮ್ಮ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತ ನಾಡಿದ ಅವರು, 2011ರಲ್ಲಿ ₹8 ಕೋಟಿ ಬಿಡುಗಡೆ ಮಾಡಿ, ಆರಂಭಿ ಸಲಾಗಿತ್ತು. ಕಿತ್ತೂರು ರಾಣಿ ಚನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ ಎಂದರು.
ಕಿತ್ತೂರು ರಾಣಿ ಚನ್ನಮ್ಮ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು. ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಕರ್ನಾಟಕದ ಹೆಮ್ಮೆಯ ಮಹಿಳೆ. ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಕೊಡುಗೆ ಯನ್ನು ಸ್ಮರಿಸಿ, ಅವರ ಆಶೋತ್ತರ ಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಹೇಳಿದರು