ಜೆಡಿಎಸ್ ಈ ಹಿಂದೆ ಪಂಚರತ್ನ ಯೋಜನೆಗಳನ್ನು ಪ್ರಕಟಿಸಿತ್ತು. ಎಲ್ಲ ರೋಗಗಳಿಗೂ ಉಚಿತ ಚಿಕಿತ್ಸೆ, ದ್ವಿತೀಯ ಪಿಯುಸಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಉಚಿತ ಶಿಕ್ಷಣ, ರೈತರಿಗೆ ದಿನದ 24 ಗಂಟೆಗಳ ಕಾಲ ನಿರಂತರ ಉಚಿತ ವಿದ್ಯುತ್ ಪೂರೈಕೆ, ರೈತರಿಗೆ ಪ್ರತೀ ಎಕರೆಗೆ ₹ 10,000 ಸಹಾಯಧನ ನೀಡುವುದು, ಎಲ್ಲರಿಗೂ ವಸತಿ ಸೌಲಭ್ಯ ಹಾಗೂ ಮಹಿಳೆಯರು ಮತ್ತು ಯುವಜನ ಸಬಲೀಕರಣಕ್ಕೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಗಳನ್ನು ‘ಪಂಚರತ್ನ’ದಲ್ಲಿ ಪ್ರಕಟಿಸಲಾಗಿತ್ತು.