<p><strong>ಬೆಳಗಾವಿ</strong>: ‘ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಯನ್ನು ಪಕ್ಷದ ಅಭಿಮಾನಿಗಳು, ಸಿದ್ದರಾಮಯ್ಯ ಅಭಿಮಾನಿಗಳು ಸೇರಿಕೊಂಡು ಮಾಡುತ್ತಿದ್ದಾರೆ. ಅವರ 75 ವರ್ಷದ ಬದುಕಿನಲ್ಲಿ 40 ವರ್ಷಗಳನ್ನು ರಾಜಕಾರಣದಲ್ಲಿ ಕಳೆದಿದ್ದಾರೆ. ಅವರನ್ನು ಅಭಿನಂದಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಜಿಲ್ಲೆಯಿಂದ ಕೂಡ 50 ಸಾವಿರ ಜನರು ಹೋಗಲಿದ್ದಾರೆ’ ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.</p>.<p>‘ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ. ಇದರಲ್ಲಿ ರಾಜಕೀಯ ಮಾಡಕೂಡದು. ಅವರೂ ಮಾಡಬಾರದು’ ಎಂದು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.</p>.<p>‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಆರ್ಎಸ್ಎಸ್ ಕಚೇರಿ ಮೇಲೆ ಅವರು ಒಮ್ಮೆಯೂ ರಾಷ್ಟ್ರಧ್ವಜ ಹಾರಿಸಿಲ್ಲ. ಇಂಥ ವಿಷಯ ಇಟ್ಟುಕೊಂಡು ನಾವು ರಾಜಕೀಯ ಮಾಡುವುದಿಲ್ಲ, ಅವರೂ ಮಾಡಬಾರದು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.</p>.<p>‘ರಾಷ್ಟ್ರಪತಿ ಆಯ್ಕೆ ವಿಚಾರದಲ್ಲೂ ನಾವು ರಾಜಕೀಯ ಮಾಡಿಲ್ಲ. ಬುಡಕಟ್ಟು ಸಮುದಾಯದ, ಪರಿಶಿಷ್ಟ ಮಹಿಳೆಯೊಬ್ಬರು ಜಗತ್ತಿನ ದೊಡ್ಡ ಪ್ರಜಾಪ್ರಭುತ್ವದ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಮತ ಸೆಳೆಯುವ ಉದ್ದೇಶಕ್ಕೆ ಈ ಆಯ್ಕೆ ನಡೆದಿದೆ ಎಂದು ನಾವು ಭಾವಿಸುವುದಿಲ್ಲ’ ಎಂದರು.</p>.<p><a href="https://www.prajavani.net/district/belagavi/belagavi-love-scam-channapattana-women-lodged-10-cases-against-officer-rajkumar-takale-957431.html" itemprop="url">ಬರೋಬ್ಬರಿ 10 ಕೇಸು ಹಾಕಿ ರಾಜಕುಮಾರ್ ಟಾಕಳೆ ತಲೆ ತಿರುಗುವಂತೆ ಮಾಡಿದ ಯುವತಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಯನ್ನು ಪಕ್ಷದ ಅಭಿಮಾನಿಗಳು, ಸಿದ್ದರಾಮಯ್ಯ ಅಭಿಮಾನಿಗಳು ಸೇರಿಕೊಂಡು ಮಾಡುತ್ತಿದ್ದಾರೆ. ಅವರ 75 ವರ್ಷದ ಬದುಕಿನಲ್ಲಿ 40 ವರ್ಷಗಳನ್ನು ರಾಜಕಾರಣದಲ್ಲಿ ಕಳೆದಿದ್ದಾರೆ. ಅವರನ್ನು ಅಭಿನಂದಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಜಿಲ್ಲೆಯಿಂದ ಕೂಡ 50 ಸಾವಿರ ಜನರು ಹೋಗಲಿದ್ದಾರೆ’ ಎಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.</p>.<p>‘ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ. ಇದರಲ್ಲಿ ರಾಜಕೀಯ ಮಾಡಕೂಡದು. ಅವರೂ ಮಾಡಬಾರದು’ ಎಂದು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.</p>.<p>‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಆರ್ಎಸ್ಎಸ್ ಕಚೇರಿ ಮೇಲೆ ಅವರು ಒಮ್ಮೆಯೂ ರಾಷ್ಟ್ರಧ್ವಜ ಹಾರಿಸಿಲ್ಲ. ಇಂಥ ವಿಷಯ ಇಟ್ಟುಕೊಂಡು ನಾವು ರಾಜಕೀಯ ಮಾಡುವುದಿಲ್ಲ, ಅವರೂ ಮಾಡಬಾರದು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.</p>.<p>‘ರಾಷ್ಟ್ರಪತಿ ಆಯ್ಕೆ ವಿಚಾರದಲ್ಲೂ ನಾವು ರಾಜಕೀಯ ಮಾಡಿಲ್ಲ. ಬುಡಕಟ್ಟು ಸಮುದಾಯದ, ಪರಿಶಿಷ್ಟ ಮಹಿಳೆಯೊಬ್ಬರು ಜಗತ್ತಿನ ದೊಡ್ಡ ಪ್ರಜಾಪ್ರಭುತ್ವದ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಮತ ಸೆಳೆಯುವ ಉದ್ದೇಶಕ್ಕೆ ಈ ಆಯ್ಕೆ ನಡೆದಿದೆ ಎಂದು ನಾವು ಭಾವಿಸುವುದಿಲ್ಲ’ ಎಂದರು.</p>.<p><a href="https://www.prajavani.net/district/belagavi/belagavi-love-scam-channapattana-women-lodged-10-cases-against-officer-rajkumar-takale-957431.html" itemprop="url">ಬರೋಬ್ಬರಿ 10 ಕೇಸು ಹಾಕಿ ರಾಜಕುಮಾರ್ ಟಾಕಳೆ ತಲೆ ತಿರುಗುವಂತೆ ಮಾಡಿದ ಯುವತಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>