ಸ್ವಾಮೀಜಿಗಳು, ಸಾಧು, ಸಂತರಿಗೆ ಪ್ರತ್ಯೇಕ ಸ್ನಾನಘಟ್ಟ ನಿರ್ಮಿಸಲಾಗಿದೆ. 200ಕ್ಕೂ ಹೆಚ್ಚು ಬಯೊ ಶೌಚಾಲಯ ಒದಗಿಸಲಾಗಿದೆ. 200 ಮಂದಿ ಸಾಧುಗಳ ವಾಸ್ತವ್ಯಕ್ಕೆ ಟೆಂಟ್ ವ್ಯವಸ್ಥೆ ಆಗಿದೆ. ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಿದ್ದು, ನುರಿತ ಈಜುಗಾರರನ್ನೂ ನಿಯೋಜಿಸಲಾಗುವುದು ಎಂದು ಅವರು ಹೇಳಿದರು.