ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಅವರಿಗೆ ಪತ್ರ ಬರೆದಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ‘ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಸಿದ್ಧತೆಗೂ ಸೂಕ್ತ ಸಮಯಾವಕಾಶ ಬೇಕಾಗುತ್ತದೆ. ಆದ್ದರಿಂದ, ಪರೀಕ್ಷೆ ನಡೆಸಲು ಕ್ಯಾಮ್ಸ್ ನಿರ್ಧರಿಸಿದ್ದು, ಅಭಿಪ್ರಾಯಕ್ಕಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದ್ದಾರೆ.