<p><strong>ಬೆಂಗಳೂರು: </strong>2021-22ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗೆ 6,210 ಅರ್ಜಿಗಳು ಸಲ್ಲಿಕೆ ಆಗಿವೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಅರ್ಜಿಗಳು ಬಂದಿವೆ.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ನೇರವಾಗಿ 1,450 ಅರ್ಜಿಗಳು ಹಾಗೂ ‘ಸೇವಾ ಸಿಂಧು’ ಪೋರ್ಟಲ್ ಮೂಲಕ 4,770 ಹೆಸರುಗಳು ಬಂದಿವೆ. ಈ ಹೆಸರುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ.</p>.<p>ಈ ವರ್ಷ ಮೊದಲ ಬಾರಿ ಆನ್ಲೈನ್ (ಸೇವಾ ಸಿಂಧು) ಮೂಲಕ ಹೆಸರು ಶಿಫಾರಸು ಮಾಡಲು ಅವಕಾಶ ನೀಡಲಾಗಿತ್ತು. 2018-19ನೇ ಸಾಲಿನ ಪ್ರಶಸ್ತಿಗೆ 1,300, 2019-20ನೇ ಸಾಲಿಗೆ 1,191, 2020-21ನೇ ಸಾಲಿನಲ್ಲಿ 1,144 ಅರ್ಜಿಗಳು ಬಂದಿದ್ದವು.</p>.<p>‘ಅರ್ಜಿ ಸಲ್ಲಿಕೆಗೆ ಆನ್ಲೈನ್ ವ್ಯವಸ್ಥೆ ಮಾಡಿರುವುದರಿಂದ ಹೆಚ್ಚು ಜನರು ನೇರವಾಗಿ ಭಾಗಿಯಾಗಿದ್ದು ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚಿನ ಗೌರವ ತಂದಿದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>2021-22ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗೆ 6,210 ಅರ್ಜಿಗಳು ಸಲ್ಲಿಕೆ ಆಗಿವೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಅರ್ಜಿಗಳು ಬಂದಿವೆ.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ನೇರವಾಗಿ 1,450 ಅರ್ಜಿಗಳು ಹಾಗೂ ‘ಸೇವಾ ಸಿಂಧು’ ಪೋರ್ಟಲ್ ಮೂಲಕ 4,770 ಹೆಸರುಗಳು ಬಂದಿವೆ. ಈ ಹೆಸರುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ.</p>.<p>ಈ ವರ್ಷ ಮೊದಲ ಬಾರಿ ಆನ್ಲೈನ್ (ಸೇವಾ ಸಿಂಧು) ಮೂಲಕ ಹೆಸರು ಶಿಫಾರಸು ಮಾಡಲು ಅವಕಾಶ ನೀಡಲಾಗಿತ್ತು. 2018-19ನೇ ಸಾಲಿನ ಪ್ರಶಸ್ತಿಗೆ 1,300, 2019-20ನೇ ಸಾಲಿಗೆ 1,191, 2020-21ನೇ ಸಾಲಿನಲ್ಲಿ 1,144 ಅರ್ಜಿಗಳು ಬಂದಿದ್ದವು.</p>.<p>‘ಅರ್ಜಿ ಸಲ್ಲಿಕೆಗೆ ಆನ್ಲೈನ್ ವ್ಯವಸ್ಥೆ ಮಾಡಿರುವುದರಿಂದ ಹೆಚ್ಚು ಜನರು ನೇರವಾಗಿ ಭಾಗಿಯಾಗಿದ್ದು ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚಿನ ಗೌರವ ತಂದಿದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>