ಕಲಬುರಗಿ: ‘ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕಲಬುರಗಿ–ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ(ಡಿಸಿಸಿ) ಬ್ಯಾಂಕ್ ಸೇರಿ ಇತರೆ ಆರು ಸಂಘಟನೆಗಳು ಜೊತೆಗೂಡಿ ಜಿಲ್ಲೆಯ ಸೇಡಂನಲ್ಲಿ ನವೆಂಬರ್ 14ರಂದು 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿವೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.