ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ಕೆಎಸ್‌ಪಿಎಸ್‌ ಅಧಿಕಾರಿಗಳಿಗೆ ಐಪಿಎಸ್‌ಗೆ ಬಡ್ತಿ

Last Updated 16 ಆಗಸ್ಟ್ 2022, 21:38 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ಸೇವೆಯ (ಕೆಎಸ್‌ಪಿಎಸ್‌) ಏಳು ಅಧಿಕಾರಿಗಳಿಗೆ ಭಾರತೀಯ ಪೊಲೀಸ್‌ ಸೇವೆಗೆ (ಐಪಿಎಸ್‌) ಬಡ್ತಿ ನೀಡಲಾಗಿದೆ.

ಸಚಿನ್ ಘೋರ್ಪಡೆ, ಅಮಟೆ ವಿಕ್ರಂ, ಸಜಿತ್‌ ವಿ. ಜೆ, ರಾಮ್‌ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ್‌ ನೇಮಗೌಡ, ಗೋಪಾಲ್‌ ಬಿ. ಬ್ಯಾಕೋಡ, ಮಹಾನಿಂಗ ನಂದಗಾನ್ವಿ ಬಡ್ತಿ ಪಡೆದವರು.

2021ನೇ ಸಾಲಿನ ಆಯ್ಕೆ ಪಟ್ಟಿಯಲ್ಲಿ ಬಡ್ತಿ ನೀಡಲು ಜುಲೈ 25ರಂದು ಆಯ್ಕೆ ಸಮಿತಿ ಸಭೆ ನಡೆದಿತ್ತು. ಇದೀಗ ಕೇಂದ್ರ ಲೋಕಸೇವಾ ಆಯೋಗ ಈ ಎಲ್ಲ ಅಧಿಕಾರಿಗಳಿಗೆ ಐಪಿಎಸ್‌ ಶ್ರೇಣಿಗೆ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಿದೆ. ಈ ಅಧಿಕಾರಿಗಳು ಕರ್ನಾಟಕ ರಾಜ್ಯ ಕೇಡರ್‌ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT