ಅಕ್ಟೋಬರ್ 28 ಮತ್ತು 29 ರಂದು ಧಾರವಾಡ, ಹುಬ್ಬಳ್ಳಿ, ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಉಪ್ಪುಂದ ಸೇರಿದಂತೆ ರಾಜ್ಯದ ಹಲವು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಗಳು ದಾಳಿಮಾಡಿ, ಶೋಧ ನಡೆಸಿದ್ದರು. ಯು.ಬಿ. ಶೆಟ್ಟಿ ಸಹೋದರರಿಗೆ ಸೇರಿದ ಮನೆಗಳು, ಕಚೇರಿಗಳು, ಅವರ ಜತೆ ವ್ಯಾವಹಾರಿಕ ನಂಟು ಹೊಂದಿರುವವರಿಗೆ ಸೇರಿದ ಸ್ಥಳಗಳಲ್ಲೂ ಶೋಧ ನಡೆಸಲಾಗಿತ್ತು.