ಕೊರೊನಾ ಸೋಂಕು ಇರುವುದರಿಂದ ಸಾಕಷ್ಟು ಮುಂಜಾಗ್ರತೆ ವಹಿಸಲಾಗುವುದು. ಇದರ ಅಂಗವಾಗಿ ಎಲ್ಲ ಶಾಸಕರು, ಸಚಿವರು, ವಿಧಾನಸಭೆ ಕಲಾಪಕ್ಕೆ ಹಾಜರಾಗಬೇಕಾದ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಅಧಿವೇಶನ ಆರಂಭವಾಗುವುದಕ್ಕೆ ಮೂರು ದಿನಗಳ ಮೊದಲು (ಸೆ.18 ರಂದು) ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಅದರ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು. ಕೋವಿಡ್ ಸೋಂಕು ಇಲ್ಲದಿದ್ದರೆ ಮಾತ್ರ ಸದನಕ್ಕೆ ಪ್ರವೇಶ ನೀಡಲಾಗುವುದು ಎಂದರು.