<p><strong>ಬೆಂಗಳೂರು</strong>:ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು 24 ಗಂಟೆಗಳ ಅವಧಿಯಲ್ಲಿ 4,867 ಪ್ರಕರಣಗಳು ದೃಢಪಟ್ಟಿದ್ದು8,404 ಜನರು ಗುಣಮುಖರಾಗಿದ್ದಾರೆ</p>.<p>ರಾಜ್ಯದಲ್ಲಿ ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ34 ಸಾವಿರದ ಗಡಿ ದಾಟಿದೆ. ಸೋಮವಾರ142 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ34,025ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ2.91ಕ್ಕೆ ತಲುಪಿದೆ.</p>.<p>ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಅಲ್ಪ ಏರಿಕೆ ಕಂಡಿದೆ. ಹೊಸದಾಗಿ 4,867 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್ ಪೀಡಿತರ ಒಟ್ಟು ಸಂಖ್ಯೆ28.11 ಲಕ್ಷಕ್ಕೆ ಏರಿಕೆಯಾಗಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/prajavani-deccan-herald-covid-19-relief-fund-839457.html" target="_blank">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ</a></strong></p>.<p>ಹಿಂದಿನ24 ಗಂಟೆಗಳಲ್ಲಿ1.49 ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದ್ದು,ಸೋಂಕು ದೃಢ ಪ್ರಮಾಣ ಶೇ 3.25ಕ್ಕೆ ತಲುಪಿದೆ.</p>.<p>ಕೋವಿಡ್ ಪೀಡಿತರ ಪೈಕಿ 8,404 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ26.54 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ1.23 ಲಕ್ಷಕ್ಕೆ ಇಳಿದಿದೆ.</p>.<p>ಬೆಂಗಳೂರು (28) ಮತ್ತು ಮೈಸೂರಿನಲ್ಲಿ (22) ಸೋಮವಾರ ಅಧಿಕ ಮಂದಿ ಅಸುನೀಗಿದ್ದಾರೆ. ಬಳ್ಳಾರಿ (12) ಹಾಗೂ ದಕ್ಷಿಣ ಕನ್ನಡ (14) ಜಿಲ್ಲೆಗಳಲ್ಲಿ ಹತ್ತಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. 22 ಜಿಲ್ಲೆಗಳಲ್ಲಿ ಇದು ಒಂದಂಕಿಗೆ ಇಳಿದಿದೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ1,034 ಮಂದಿಗೆ ಸೋಂಕು ತಗುಲಿದೆ. ಮೈಸೂರಿನಲ್ಲಿ (546) ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.11 ಜಿಲ್ಲೆಗಳಲ್ಲಿ200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು 24 ಗಂಟೆಗಳ ಅವಧಿಯಲ್ಲಿ 4,867 ಪ್ರಕರಣಗಳು ದೃಢಪಟ್ಟಿದ್ದು8,404 ಜನರು ಗುಣಮುಖರಾಗಿದ್ದಾರೆ</p>.<p>ರಾಜ್ಯದಲ್ಲಿ ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ34 ಸಾವಿರದ ಗಡಿ ದಾಟಿದೆ. ಸೋಮವಾರ142 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ34,025ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ2.91ಕ್ಕೆ ತಲುಪಿದೆ.</p>.<p>ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಅಲ್ಪ ಏರಿಕೆ ಕಂಡಿದೆ. ಹೊಸದಾಗಿ 4,867 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್ ಪೀಡಿತರ ಒಟ್ಟು ಸಂಖ್ಯೆ28.11 ಲಕ್ಷಕ್ಕೆ ಏರಿಕೆಯಾಗಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/prajavani-deccan-herald-covid-19-relief-fund-839457.html" target="_blank">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ</a></strong></p>.<p>ಹಿಂದಿನ24 ಗಂಟೆಗಳಲ್ಲಿ1.49 ಲಕ್ಷ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದ್ದು,ಸೋಂಕು ದೃಢ ಪ್ರಮಾಣ ಶೇ 3.25ಕ್ಕೆ ತಲುಪಿದೆ.</p>.<p>ಕೋವಿಡ್ ಪೀಡಿತರ ಪೈಕಿ 8,404 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ26.54 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ1.23 ಲಕ್ಷಕ್ಕೆ ಇಳಿದಿದೆ.</p>.<p>ಬೆಂಗಳೂರು (28) ಮತ್ತು ಮೈಸೂರಿನಲ್ಲಿ (22) ಸೋಮವಾರ ಅಧಿಕ ಮಂದಿ ಅಸುನೀಗಿದ್ದಾರೆ. ಬಳ್ಳಾರಿ (12) ಹಾಗೂ ದಕ್ಷಿಣ ಕನ್ನಡ (14) ಜಿಲ್ಲೆಗಳಲ್ಲಿ ಹತ್ತಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. 22 ಜಿಲ್ಲೆಗಳಲ್ಲಿ ಇದು ಒಂದಂಕಿಗೆ ಇಳಿದಿದೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ1,034 ಮಂದಿಗೆ ಸೋಂಕು ತಗುಲಿದೆ. ಮೈಸೂರಿನಲ್ಲಿ (546) ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.11 ಜಿಲ್ಲೆಗಳಲ್ಲಿ200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>