ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ ರೈತರಿಗೆ ₹975 ‌ಕೋಟಿ ಜಮಾ: ಬೊಮ್ಮಾಯಿ

Last Updated 21 ಮಾರ್ಚ್ 2023, 4:59 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಇಂದು ₹975 ಕೋಟಿಯನ್ನು ರಾಜ್ಯದ 48,75,000 ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನ 2 ನೇ ಕಂತಿನ ಆರ್ಥಿಕ ನೆರವಾದ ₹975 ಕೋಟಿಯನ್ನು ರಾಜ್ಯದ 48,75,000 ರೈತರ ಖಾತೆಗಳಿಗೆ ನೇರವಾಗಿ ಜಮಾಕ್ಕೆ ಇಂದು ಚಾಲನೆ ನೀಡಲಿದ್ದೇನೆ ಎಂದಿದ್ದಾರೆ.

ಪಿಎಂ ಕಿಸಾನ್‌–ಕರ್ನಾಟಕ ವಿಭಾಗದಿಂದ ಈ ನಿಧಿ ಜಮಾ ಆಗುತ್ತಿದೆ. ಭಾರತದಲ್ಲಿರುವ ಭೂಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲ ಒದಗಿಸುವ ಯೋಜನೆ ಇದಾಗಿದೆ. ಕೇಂದ್ರದಿಂದ ₹6000 ಹಾಗೂ ರಾಜ್ಯದಿಂದ ₹4000 ಸೇರಿ ಒಟ್ಟು ₹10000 ರೈತರಿಗೆ ನೆರವು ನೀಡಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಯೋಜನೆ ಅಡಿಯಲ್ಲಿ 2019 ರಿಂದ ಈವರೆಗೆ 50.3 ಲಕ್ಷ ಫಲಾನುಭವಿಗಳಿಗೆ ₹4,821 ಕೋಟಿ ಆರ್ಥಿಕ ಸಹಾಯಧನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT