<p><strong>ಬೆಂಗಳೂರು: </strong>‘ಇದೇ 23ರಿಂದ 9-12ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಿದ್ದು, ತರಗತಿಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬೇಕೆಂದು ಎಂಬ ಬಗ್ಗೆಯೂ ನಿರ್ಧರಿಸಲಾಗಿದೆ. ಆ ಮೂಲಕ, ಕೊರೊನಾ ಸೋಂಕು ಹರಡದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಬಿಬಿಎಂಪಿ, ಸರ್ಕಾರಿ ಶಾಲೆ ತೆರೆಯಬೇಕು. ಆದರೆ, ತರಗತಿಯಲ್ಲಿ ಹೆಚ್ಚು ಮಕ್ಕಳು ಇರಬಾರದು ಎಂಬ ಆದೇಶ ಹೊರಡಿಸಲಾಗಿದೆ. ಸದ್ಯಕ್ಕೆ 9-12ನೇ ತರಗತಿಗಳನ್ನು ಆರಂಭಿಸಿ ಪ್ರಾಯೋಗಿಕವಾಗಿ ನೋಡಿಕೊಂಡು, ನಂತರ ಹಂತ ಹಂತವಾಗಿ 7 ಮತ್ತು 8ನೇ ತರಗ ತೆರೆಯಲಾಗುವುದು’ ಎಂದರು.</p>.<p>ಮಾಸ್ಕ್ ವಿಚಾರದಲ್ಲಿ ಮಾರ್ಷಲ್ಗಳ ಕಿರಿಕಿರಿ ಹಾಗೂ ರಾಜಕಾರಣಿಗಳು ಮಾಸ್ಕ್ ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ರಾಜಕಾರಣಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಎಲ್ಲರೂ ಮಾಸ್ಕ್ ಹಾಕುವುದು ಕಡ್ಡಾಯ. ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ ಕಟ್ಟಬೇಕಾಗುತ್ತದೆ. ದೆಹಲಿಯಲ್ಲಿ ₹ 5 ಸಾವಿರದಂಡ ಹಾಕಲಾಗುತ್ತದೆ. ಮಾಸ್ಕ್ ಹಾಕದವರಿಗೆ ದಂಡ ನಮ್ಮಲ್ಲಿಯೇ ಕಡಿಮೆ ಇದೆ. ನಿಯಮಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.</p>.<p><a href="https://www.prajavani.net/karnataka-news/come-to-school-without-hesitate-cm-invites-students-to-school-covid-19-859665.html" itemprop="url">ಆತಂಕ ಇಲ್ಲದೆ ಶಾಲೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಆಹ್ವಾನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಇದೇ 23ರಿಂದ 9-12ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಿದ್ದು, ತರಗತಿಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬೇಕೆಂದು ಎಂಬ ಬಗ್ಗೆಯೂ ನಿರ್ಧರಿಸಲಾಗಿದೆ. ಆ ಮೂಲಕ, ಕೊರೊನಾ ಸೋಂಕು ಹರಡದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಬಿಬಿಎಂಪಿ, ಸರ್ಕಾರಿ ಶಾಲೆ ತೆರೆಯಬೇಕು. ಆದರೆ, ತರಗತಿಯಲ್ಲಿ ಹೆಚ್ಚು ಮಕ್ಕಳು ಇರಬಾರದು ಎಂಬ ಆದೇಶ ಹೊರಡಿಸಲಾಗಿದೆ. ಸದ್ಯಕ್ಕೆ 9-12ನೇ ತರಗತಿಗಳನ್ನು ಆರಂಭಿಸಿ ಪ್ರಾಯೋಗಿಕವಾಗಿ ನೋಡಿಕೊಂಡು, ನಂತರ ಹಂತ ಹಂತವಾಗಿ 7 ಮತ್ತು 8ನೇ ತರಗ ತೆರೆಯಲಾಗುವುದು’ ಎಂದರು.</p>.<p>ಮಾಸ್ಕ್ ವಿಚಾರದಲ್ಲಿ ಮಾರ್ಷಲ್ಗಳ ಕಿರಿಕಿರಿ ಹಾಗೂ ರಾಜಕಾರಣಿಗಳು ಮಾಸ್ಕ್ ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ರಾಜಕಾರಣಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಎಲ್ಲರೂ ಮಾಸ್ಕ್ ಹಾಕುವುದು ಕಡ್ಡಾಯ. ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ ಕಟ್ಟಬೇಕಾಗುತ್ತದೆ. ದೆಹಲಿಯಲ್ಲಿ ₹ 5 ಸಾವಿರದಂಡ ಹಾಕಲಾಗುತ್ತದೆ. ಮಾಸ್ಕ್ ಹಾಕದವರಿಗೆ ದಂಡ ನಮ್ಮಲ್ಲಿಯೇ ಕಡಿಮೆ ಇದೆ. ನಿಯಮಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.</p>.<p><a href="https://www.prajavani.net/karnataka-news/come-to-school-without-hesitate-cm-invites-students-to-school-covid-19-859665.html" itemprop="url">ಆತಂಕ ಇಲ್ಲದೆ ಶಾಲೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಆಹ್ವಾನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>