<p><strong>ಬೆಂಗಳೂರು: </strong>‘ಕರಾವಳಿ ಕರ್ನಾಟಕಕ್ಕೆ ಪಡಿತರ ಮೂಲಕ ನವೆಂಬರ್ ತಿಂಗಳಿಂದ ಕೆಂಪು ಕುಚ್ಚಲಕ್ಕಿ ಪೂರೈಸುವ ನಿರ್ಣಯ ಮಾಡಲಾಗಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಗುರುವಾರ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು,‘ಪಡಿತರ ಮೂಲಕ ಕೆಂಪು ಕುಚ್ಚಲಕ್ಕಿ ವಿತರಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಬೇಡಿಕೆ ಇತ್ತು. ಪಡಿತರದಲ್ಲಿ ನೀಡುವ ಸಾಮಾನ್ಯ ಅಕ್ಕಿ ಊಟ ಮಾಡಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ತಯಾರಾಗುವ ಕೆಂಪು ಕುಚ್ಚಲಕ್ಕಿ ಬೇಕು ಅಂತ ಜನ ಬೇಡಿಕೆ ಇಟ್ಟಿದ್ದರು’ ಎಂದು ತಿಳಿಸಿದರು.</p>.<p>‘ಹಲವರು ಪಡಿತರ ಪಡೆಯದೆ, ಅಕ್ಕಿ ಮಾರಾಟದ ದೂರುಗಳು ಬರುತ್ತಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಆಹಾರ ಸಚಿವರ ಜೊತೆಗೂ ಸಭೆ ಮಾಡಲಾಗಿದೆ. ಎಂಒ4, ಜ್ಯೋತಿ, ಅಭಿಲಾಷ, ಜಯ ತಳಿಯ ಅಕ್ಕಿ ಪಡೆಯಲು ಕೇಂದ್ರದ ಅನುಮತಿ ಬೇಕಿದೆ. ಕರಾವಳಿ ಜಿಲ್ಲೆಯ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕರಾವಳಿ ಕರ್ನಾಟಕಕ್ಕೆ ಪಡಿತರ ಮೂಲಕ ನವೆಂಬರ್ ತಿಂಗಳಿಂದ ಕೆಂಪು ಕುಚ್ಚಲಕ್ಕಿ ಪೂರೈಸುವ ನಿರ್ಣಯ ಮಾಡಲಾಗಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಗುರುವಾರ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು,‘ಪಡಿತರ ಮೂಲಕ ಕೆಂಪು ಕುಚ್ಚಲಕ್ಕಿ ವಿತರಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಬೇಡಿಕೆ ಇತ್ತು. ಪಡಿತರದಲ್ಲಿ ನೀಡುವ ಸಾಮಾನ್ಯ ಅಕ್ಕಿ ಊಟ ಮಾಡಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ತಯಾರಾಗುವ ಕೆಂಪು ಕುಚ್ಚಲಕ್ಕಿ ಬೇಕು ಅಂತ ಜನ ಬೇಡಿಕೆ ಇಟ್ಟಿದ್ದರು’ ಎಂದು ತಿಳಿಸಿದರು.</p>.<p>‘ಹಲವರು ಪಡಿತರ ಪಡೆಯದೆ, ಅಕ್ಕಿ ಮಾರಾಟದ ದೂರುಗಳು ಬರುತ್ತಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಆಹಾರ ಸಚಿವರ ಜೊತೆಗೂ ಸಭೆ ಮಾಡಲಾಗಿದೆ. ಎಂಒ4, ಜ್ಯೋತಿ, ಅಭಿಲಾಷ, ಜಯ ತಳಿಯ ಅಕ್ಕಿ ಪಡೆಯಲು ಕೇಂದ್ರದ ಅನುಮತಿ ಬೇಕಿದೆ. ಕರಾವಳಿ ಜಿಲ್ಲೆಯ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>