ಅಂಬಾರಿ ಆನೆ ಜೊತೆ ಕುಮ್ಕಿ ಆನೆಗಳಾಗಿ ಚೈತ್ರಾ, ಕಾವೇರಿ ಹೆಜ್ಜೆ ಹಾಕಿದರೆ, ಅರ್ಜುನ ನಿಶಾನೆ ಆನೆಯಾಗಿ ಜವಾಬ್ದಾರಿ ನಿರ್ವಹಿಸಿದ. ಮಹೇಂದ್ರ, ಭೀಮ, ಧನಂಜಯ, ಗೋಪಾಲಸ್ವಾಮಿ ಹಾಗೂ ಗೋಪಿ ಆನೆಗಳು ಜೊತೆ ಯಾದವು. ಆಕರ್ಷಕವಾದ ಸ್ತಬ್ಧಚಿತ್ರಗಳು, ಪೊಲೀಸ್ ಪಡೆ, ಅಶ್ವಾರೋಹಿ ಪಡೆಗಳೊಂದಿಗೆ, ಜಾನಪದ ಕಲಾ ತಂಡಗಳ ನೂರಾರು ಕಲಾವಿದರು ಸಾಂಸ್ಕೃತಿಕ ವೈಭವವನ್ನು ಸೃಷ್ಟಿಸಿದರು.