ಲೋಕೇಶ ಹಲವು ದಿನಗಳಿಂದ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಬಗ್ಗೆ ನಾಯಕನಹಟ್ಟಿ, ತಳಕು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. ಇದರಿಂದ ಇಡೀ ಕುಟುಂಬ ತಲೆತಗ್ಗಿಸುವ ಸನ್ನಿವೇಶ ಎದುರಾಗಿತ್ತು. ‘ಕಳವು ಮಾಡಬೇಡ ಎಂದು ಕುಟುಂಬದ ಎಲ್ಲ ಸದಸ್ಯರು ಹಲವು ಬಾರಿ ಬುದ್ಧಿವಾದ ಹೇಳಿದರೂ ಲೋಕೇಶ ಕೃತ್ಯವೆಸಗುವುದನ್ನು ಬಿಟ್ಟಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.