<p><strong>ಹುಬ್ಬಳ್ಳಿ</strong>: ಕೋವಿಡ್ ನೆಪವೊಡ್ಡಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿಲ್ಲ. ಇದನ್ನು ವಿರೋಧಿಸಿ ಗಜಾನನ ಮಹಾಮಂಡಲದ ವತಿಯಿಂದ ಅ. 17ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಮಣ್ಣಿನ ಗಣಪತಿಯೊಂದಿಗೆ ಧರಣಿ ನಡೆಸಲಾಗುವುದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಲ್ಗಳು, ಬಾರ್ಗಳು, ಸಾರಿಗೆ, ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ. ಆದರೆ ಗಣಪತಿ ಪ್ರತಿಷ್ಠಾನಕ್ಕೆ ವಿರೋಧ ಎಕೆ? ಎಂದು ಪ್ರಶ್ನಿಸಿದರು.</p>.<p>ಕೋವಿಡ್ ಇರುವ ಕಾರಣ ನಮಗೂ ಸಮಾಜದ ಬಗ್ಗೆ ಕಾಳಜಿ ಇದೆ. ನೂರು ಷರತ್ತುಗಳನ್ನು ವಿಧಿಸಿದರೂ ನಾವು ಒಪ್ಪುತ್ತೇವೆ. ಅನುಮತಿ ಕೊಡಲೇಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಜವಾಬ್ದಾರಿ ಆಯಾ ಜಿಲ್ಲಾಧಿಕಾರಿಗೆ ನೀಡಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿಲ್ಲ. ಇದನ್ನು ನಾವು ಒಪ್ಪುವುದಿಲ್ಲ ಎಂದರು.</p>.<p>ಮಹಾರಾಷ್ಟ್ರ ದಲ್ಲಿಯೂ ಕೋವಿಡ್ ಪ್ರಕರಣಗಳು ಇದ್ದರೂ ಜೂನ್ ನಲ್ಲಿಯೇ ಅನುಮತಿ ಕೊಡಲಾಗಿದೆ. ರಾಜ್ಯದಲ್ಲಿ ಯಾಕೆ ಕೊಡುತ್ತಿಲ್ಲ. ಸರ್ಕಾರ ಅನುಮತಿ ಕೊಡಲಿ; ಬಿಡಲಿ ಗಣೇಶೋತ್ಸವ ಪ್ರತಿಷ್ಠಾಪಿಸುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕೋವಿಡ್ ನೆಪವೊಡ್ಡಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿಲ್ಲ. ಇದನ್ನು ವಿರೋಧಿಸಿ ಗಜಾನನ ಮಹಾಮಂಡಲದ ವತಿಯಿಂದ ಅ. 17ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಮಣ್ಣಿನ ಗಣಪತಿಯೊಂದಿಗೆ ಧರಣಿ ನಡೆಸಲಾಗುವುದು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಲ್ಗಳು, ಬಾರ್ಗಳು, ಸಾರಿಗೆ, ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ. ಆದರೆ ಗಣಪತಿ ಪ್ರತಿಷ್ಠಾನಕ್ಕೆ ವಿರೋಧ ಎಕೆ? ಎಂದು ಪ್ರಶ್ನಿಸಿದರು.</p>.<p>ಕೋವಿಡ್ ಇರುವ ಕಾರಣ ನಮಗೂ ಸಮಾಜದ ಬಗ್ಗೆ ಕಾಳಜಿ ಇದೆ. ನೂರು ಷರತ್ತುಗಳನ್ನು ವಿಧಿಸಿದರೂ ನಾವು ಒಪ್ಪುತ್ತೇವೆ. ಅನುಮತಿ ಕೊಡಲೇಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಜವಾಬ್ದಾರಿ ಆಯಾ ಜಿಲ್ಲಾಧಿಕಾರಿಗೆ ನೀಡಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿಲ್ಲ. ಇದನ್ನು ನಾವು ಒಪ್ಪುವುದಿಲ್ಲ ಎಂದರು.</p>.<p>ಮಹಾರಾಷ್ಟ್ರ ದಲ್ಲಿಯೂ ಕೋವಿಡ್ ಪ್ರಕರಣಗಳು ಇದ್ದರೂ ಜೂನ್ ನಲ್ಲಿಯೇ ಅನುಮತಿ ಕೊಡಲಾಗಿದೆ. ರಾಜ್ಯದಲ್ಲಿ ಯಾಕೆ ಕೊಡುತ್ತಿಲ್ಲ. ಸರ್ಕಾರ ಅನುಮತಿ ಕೊಡಲಿ; ಬಿಡಲಿ ಗಣೇಶೋತ್ಸವ ಪ್ರತಿಷ್ಠಾಪಿಸುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>