<p><strong>ಬೆಂಗಳೂರು:</strong> ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p class="Subhead">ಅತಿವೃಷ್ಟಿ ಹಾಗೂ ಪ್ರವಾಹದಿಂದ ₹ 5,690 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ₹ 765 ಕೋಟಿ ಪರಿಹಾರ ದೊರೆಯಬೇಕಿದೆ. ಅಧಿಕಾರಿಗಳ ತಂಡ ವರದಿ ಸಲ್ಲಿಸಿದ ಬಳಿಕ ಈ ಮೊತ್ತ ಬಿಡುಗಡೆಯಾಗಲಿದೆ ಎಂದರು.</p>.<p class="Subhead"><strong>ಭೂಮಾಪಕರ ನೇಮಕ: </strong>ರಾಜ್ಯದಲ್ಲಿ ಭೂಮಾಪನಕ್ಕೆ ಸಂಬಂಧಿಸಿದ ಎರಡು ಲಕ್ಷ ಕಡತಗಳು ಬಾಕಿ ಇವೆ. ಅವುಗಳ ತ್ವರಿತ ವಿಲೇವಾರಿಗಾಗಿ 820 ಭೂಮಾಪಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಇನ್ನೂ 600 ಭೂಮಾಪಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p class="Subhead">ಅತಿವೃಷ್ಟಿ ಹಾಗೂ ಪ್ರವಾಹದಿಂದ ₹ 5,690 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ₹ 765 ಕೋಟಿ ಪರಿಹಾರ ದೊರೆಯಬೇಕಿದೆ. ಅಧಿಕಾರಿಗಳ ತಂಡ ವರದಿ ಸಲ್ಲಿಸಿದ ಬಳಿಕ ಈ ಮೊತ್ತ ಬಿಡುಗಡೆಯಾಗಲಿದೆ ಎಂದರು.</p>.<p class="Subhead"><strong>ಭೂಮಾಪಕರ ನೇಮಕ: </strong>ರಾಜ್ಯದಲ್ಲಿ ಭೂಮಾಪನಕ್ಕೆ ಸಂಬಂಧಿಸಿದ ಎರಡು ಲಕ್ಷ ಕಡತಗಳು ಬಾಕಿ ಇವೆ. ಅವುಗಳ ತ್ವರಿತ ವಿಲೇವಾರಿಗಾಗಿ 820 ಭೂಮಾಪಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಇನ್ನೂ 600 ಭೂಮಾಪಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>