ಮಹದಾಯಿ ಹೋರಾಟಗಾರ ಮತ್ತು ಎಎಪಿ ಮುಖಂಡ ವಿಕಾಸ್ ಸೊಪ್ಪಿನ್ ಮಾತನಾಡಿ, ‘ಬಿಜೆಪಿಯು ಈ ವಿಚಾರದಲ್ಲಿ ಬೀಗಬೇಕಾದ ಅಗತ್ಯವಿಲ್ಲ. ಬದಲಾಗಿ, ಈ ಯೋಜನೆಯಿಂದ ಅನುಕೂಲ ಪಡೆಯಬಹುದಾದ ಹುಬ್ಬಳ್ಳಿ-ಧಾರವಾಡ, ನರಗುಂದ, ನವಲಗುಂದ, ಬಾದಾಮಿ, ರೋಣ, ಗದಗ ಹಾಗೂ ಸುಮಾರು 100 ಗ್ರಾಮಗಳಿಗೆ ಶೀಘ್ರವೇ ಕುಡಿಯುವ ನೀರು ಒದಗಿಸಲು ಗಂಭೀರ ಪ್ರಯತ್ನ ಮಾಡಲಿ’ ಎಂದು ಹೇಳಿದರು.