ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ, ‘ನಗರದಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ರಸ್ತೆಗಳಲ್ಲಿ ನೀರು ನಿಂತಿರಬಹುದು. ಕ್ಷೇತ್ರದಲ್ಲಿ ಪ್ರವಾಹ ಪರಿಸ್ಥಿತಿ ಮೊದಲಿಗಿಂತ ಈಗ ನಿಯಂತ್ರಣಕ್ಕೆ ಬಂದಿದೆ. ಸುಖಾಸುಮ್ಮನೆ ಒತ್ತುವರಿ ಆರೋಪ ಮಾಡುವುದು ಸರಿಯಲ್ಲ. ಒಂದು ವೇಳೆ ಒತ್ತುವರಿಯಾಗಿದ್ದರೆ, ಅದರ ಪಟ್ಟಿಯನ್ನು ನನಗೆ ನೀಡಲಿ’ ಎಂದರು.