ಬೆಂಗಳೂರು: ಆಮ್ ಆದ್ಮಿ ಪಕ್ಷವು ‘ಸುರಕ್ಷಿತ ಯುಗಾದಿ- ಸಂತಸ ಯುಗಾದಿ’ ಎಂಬ ಘೋಷವಾಕ್ಯದೊಂದಿಗೆ ನಗರದ ಎಲ್ಲಾ ವಾರ್ಡ್ಗಳಲ್ಲಿನ ಮಾರುಕಟ್ಟೆ, ಧಾರ್ಮಿಕ ಕ್ಷೇತ್ರ, ಬಸ್ ನಿಲ್ದಾಣ ಸೇರಿದಂತೆ ಜನ ಸಂದಣಿಯ ಇತರ ಸ್ಥಳಗಳಲ್ಲಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದಕ್ಕೆ ಭಾನುವಾರ ಚಾಲನೆ ನೀಡಲಾಯಿತು.